Home / ಕವನ / ಕವಿತೆ / ಊರ್ಮಿಳೆ

ಊರ್ಮಿಳೆ

ಕರೆದರೂ ತಿರುಗದೆ
ಜಿಗಿದು ಓಡಿದಳಲ್ಲ,
ಯಾರಿವಳು ಎರಳೆಮರಿ ಎಂದಿರೆ?
ಇವಳೆ ಊರ್ಮಿಳೆ, ತುಂಬುಜಂಬುನೇರಳೆ
ನಮ್ಮ ಮಲೆನಾಡ ಸಿಹಿಪೇರಲೆ.
ನನಗು ಇವಳಿಗು ಸ್ನೇಹ ತೀರ ಈಚೆಗೆ ಎನ್ನಿ
ನನ್ನ ಕಂಡರೆ ನಾಚಿಕೆ,
ಪ್ರೀತಿಯಲಿ ಬಾ ಎಂದು ರಮಿಸಿದರೆ ನಿಲ್ಲುವಳು
ನಾಲ್ಕಾರು ಮಾರಾಚೆಗೆ –
ಮತ್ತೊಮ್ಮೆ ಕರೆದಾನೆ ಎಂಬಾಸೆ ಮಿನುಗುವುದು
ಕಣ್ಣ ತಿಳಿತೆರೆಯಾಚೆಗೆ.
ನಮ್ಮ ನಡುವಿನ ಇಂಥ ಅಂತರಕೆ ನಾನಿಟ್ಟೆ
ಚಾಕಲೇಟಿನ ಸೇತುವೆ!

ಪುಟ್ಟ ಕಣ್ದೊಟ್ಟಿಲಲಿ
ಮಿಂಚರಸದಲಿ ನೆನೆದ ಎರಡು ಕರಿಗೋಲಿ,
ಬಾನು ಕಡಲರಿಯದದರಾಳದಲಿ ಬ್ರಹ್ಮಾಂಡ
ಹೊಡೆಯುವುದು ಜೋಲಿ,
ತುಟಿ ತೆರೆದರಿವಳು-
ಬಾನು ಬುವಿಯನು ತಬ್ಬಿ
ಹಗಲು ಇರುಳನು ದಬ್ಬಿ
ಮರಮರದಿ ಹಾಡುವುವು ಹಕ್ಕಿ ಕೊರಳುಬ್ಬಿ;
ಹೂ ಸುರಿದು ಹಣ್ ಬಿರಿದು
ದಡದಡನೆ ಹೊಳೆ ಹರಿದು
ಇಳೆಗೆ ಮಳೆ ತುಳುಕುವುದು ಹೂಬಿಸಿಲು ಹಬ್ಬಿ!

ಕಿಲಕಿಲನೆ ನಕ್ಕಳೆಂದರೆ ಇವಳು
ಜಡಕು ಕಚಗುಳಿಯನಿಟ್ಟಂತೆ,
ಹರಿದ ಕರಿಮುಗಿಲಲ್ಲಿ ಮಲಗಿರುವ ಬಾನಿಗೆ
ಹುಣ್ಣಿಮೆಯ ಹಾಲು ಹರಿದಂತೆ,
ಕರಿಯ ಕಿರುಜಡೆ ಬೆಣ್ಣೆಗನ್ನೆ ಮೇಲಿಳಿದಿರಲು
ಮಿಂಚು ಮುಗಿಲಾಟದಂತೆ,
ಹೂಗಾಲನಿಟ್ಟು ಜಿಗಿದರೆ ಅದರ ಸ್ಪರ್ಶಕೇ
ಪುಳಕ ನೆಲಕೆ!

ತುಂಬುಕಿತ್ತಲೆಗೆನ್ನೆ ಮಿಂಚುಗಣ್ಣಿನ ಹುಡುಗಿ
ಹೂಮೈಯ ಬೆಡಗಿ!
ತಿಂಗಳನೆ ನಾಚಿಸುವ ಬೆಣ್ಣೆಗೆನ್ನೆಯೊಳೊಂದು
ಕಪ್ಪು ಕಲೆ ಮಿರುಗಿ
ಮುದ್ದು ಮುಖದೊಳಗೊಮ್ಮೆ ತುಂಟನಗೆ ತುಳುಕಿಸಲು
ನಾ ಮೈಯ ಮರೆತು,
ಮುತ್ತಮಳೆ ಸುರಿಸುವೆನು ನೋಯುವುದೊ ಹೂಗೆನ್ನೆ
ಎಂಬುದನೂ ಮರೆತು.

ನಿನ್ನಂಥ ನೆರೆಯಿರಲು
ಯಾವ ಭಾಗ್ಯಕೆ ನನಗೆ ಕಡಮೆ ಹೇಳು?
ನೀ ನನ್ನ ಬಳಿಯಲಿರೆ
ಮುಕ್ತಿಯೂ ಬೇಡ ಸಾಕಿಂಥ ಬಾಳು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...