Home / ಕಥೆ / ಕಿರು ಕಥೆ / ಸಿದ್ಧಾಂತ

ಸಿದ್ಧಾಂತ

ಉಗ್ರಪ್ಪ ನಾಲ್ಕನೆಯ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದ. ಅಭಿಮಾನಿಗಳು ಅತ್ಯಂತ ವೈಭವದಿಂದ ಅವನ ವಿಜಯೋತ್ಸವ ಆಚರಿಸಿದರು. ತೆರೆದ ವಾಹನದಲ್ಲಿ ಊರ ತುಂಬ ಮೆರೆಸಿದರು.

ಗೆಲುವಿನಿಂದ ಬೀಗಿಕೊಂಡಿದ್ದ ಉಗ್ರಪ್ಪನ ಬಳಿಗೆ ಬಂದ ಪತ್ರಕರ್ತನೊಬ್ಬ “ನೀವು ಕೂದಲೆಳೆಯಲ್ಲಿ ಸೋಲು ತಪ್ಪಸಿಕೊಂಡಿರಿ” ಎಂದ.

“ನಾನು ಸೋಲಿಲ್ಲದ ಸರದಾರ” ಅತ್ಯುತ್ಸಾಹದಿಂದ ಉದ್ಗರಿಸಿದ ಉಗ್ರಪ್ಪ.

“ನಿಮ್ಮ ಅಧಿಕಾರದ ಅವಧಿಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ರಾಜಮಾರ್ಗಗಳನ್ನಾಗಿ ರೂಪಿಸುತ್ತೇನೆ ಎಂದಿದ್ದೀರಿ” ಪರ್ತಕರ್ತ ಹೇಳಿದ.

“ಹೌದು” ಚುಟುಕಾಗಿ ಉಲಿದ ಉಗ್ರಪ್ಪ.

“ಉದ್ದಿಮೆ ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಭವಿಷ್ಯ ನೀಡುತ್ತೇನೆಂದು ಪ್ರಮಾಣ ಮಾಡಿದ್ದೀರಿ”.

“ಅದು ನಿಜ”

“ರೈತರಿಗೆ ಉಚಿತ ವಿದ್ಯುತ್, ಪಂಪ್‌ಸೆಟ್ಟು, ಬೀಜ, ಗೊಬ್ಬರ ಪೂರೈಸಿ ಅನ್ನದಾತರನ್ನು ಬದುಕಿಸುತ್ತೇನೆ ಎಂದು ಘೋಷಿಸಿದ್ದೀರಿ”.

“ಹೌದು”.

“ಕುಡಿಯುವ ನೀರಿಗೆ ತೊಂದರೆ ಬಾರದಂತೆ ನೋಡಿಕೊಳ್ಳುತ್ತೇನೆ. ಹಸಿವಿನ ಸಂಕಟದಿಂದ ಜನರು ಸಾಯದಂತೆ ಎಚ್ಚರಿಕೆ ವಹಿಸುತ್ತೇನೆ. ನೂರಕ್ಕೆ ನೂರರಷ್ಟು ಜನರನ್ನು ಸಾಕ್ಷರರನ್ನಾಗಿಸಲು ಹೋರಾಡುತ್ತೇನೆ. ರೋಗ-ರುಜಿನಗಳಿಂದ ಜನರು ಸತ್ತು ಹೋಗದಂತೆ ಅಮೃತ ಕುಡಿಸುತ್ತೇನೆ ಎಂದು ನೂರಾರು ಸಭೆಗಳಲ್ಲಿ ಹೇಳುತ್ತಿದ್ದಿರಿ.”

“ಹೌದು… ಹೌದು… ಹೌದು.”

“ಆದರೆ ನೀವು ಏನನ್ನೂ ಮಾಡಲಿಲ್ಲ” ವಿಷಾದ ವ್ಯಕ್ತಪಡಿಸಿದ ಪತ್ರಕರ್ತ.

“ನನ್ನ ಗೆಲುವಿಗೆ ಅದೇ ಆಧಾರವಲ್ಲವೆ?” ನಗುತ್ತ ಕೇಳಿದ ಉಗ್ರಪ್ಪ.

ಅವನ ಪ್ರಶ್ನೆಗೆ ದಿಗಿಲುಗೊಂಡ ಪತ್ರಕರ್ತ ತುಸು ಏರುಧ್ವನಿಯಲ್ಲಿ ಹೇಳಿದ “ನೀವು ರಾಜಕಾರಣಿಗಳು ಬರಿ ಸುಳ್ಳು ಹೇಳುತ್ತೀರಿ. ಭರವಸೆಯ ಗಾಳಿ ಊದಿ ಜನರನ್ನು ರಬ್ಬರಿನ ಬಲೂನ್ ಆಗಿಸುತ್ತೀರಿ.”

“ಎಷ್ಟೇ ಆಗಲಿ ನೀವೂ ಪತ್ರಕರ್ತರು. ರಾಜಕಾರಣದ ಸಿದ್ಧಾಂತವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ” ಹ್ಹ ಹ್ಹ ಹ್ಹ…. ಎಂದು ಹಗುರಾಗಿ ನಕ್ಕ ಉಗ್ರಪ್ಪ. ಆ ಲಜ್ಜೆಗೇಡಿ ನಗೆ ಕಂಡು ಕೋಪಿಸಿಕೊಂಡ ಪತ್ರಕರ್ತ “ಇಂಥ ರಾಜಕಾರಣದಿಂದ ದೇಶಕ್ಕೇನು ಲಾಭ?” ಎಂದು ವ್ಯಂಗ್ಯದ ಬಾಣ ಎಸೆದ.

“ದೇಶಕ್ಕೇನೋ ಗೊತ್ತಿಲ್ಲ. ನನಗಂತೂ ಇದೆ. ನನ್ನ ನಂಬಿಕೊಂಡವರಿಗೂ ಅನುಕೂಲವಿದೆ” ಯಾವ ಮುಜುಗರವಿಲ್ಲದೆ ಹೇಳಿದ ಉಗ್ರಪ್ಪ.

“ಒಂದಿಲ್ಲ ಒಂದಿನ ಜನ ನಿಮ್ಮ ಸ್ವಾರ್ಥದ ಎದುರು ನಿಂತರೆ?”

“ಬಲೂನಿಗೆ ಗಾಳಿ ತುಂಬುವುದರಲ್ಲಿ ನಾನು ಚಾಣಾಕ್ಷ. ಹಾಗೆಯೇ ಉಬ್ಬಿದ ಬಲೂನುಗಳ ಗಾಳಿ ತೆಗೆಯುವ ತಂತ್ರದಲ್ಲಿ ನಾನು ಎಕ್ಸ್‌ಪರ್ಟು ಮಾರಾಯರೆ!” ಆತ್ಮವಿಶ್ವಾಸ ವ್ಯಕ್ತಪಡಿಸಿದ ಉಗ್ರಪ್ಪ.

ಪತ್ರಕರ್ತ ತುಟಿ ಹೊಲಿದುಕೊಂಡಂತೆ ಕುಳಿತ.

*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...