ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಡು-ಪಾಡು
Next post ಅಕ್ಕ ನೀ ಕೇಳವ್ವ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys