Home / ಕಥೆ / ಕಿರು ಕಥೆ / ನಾನು ಬದುಕುತ್ತೇನೆ

ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...