Home / ಕಥೆ / ಕಿರು ಕಥೆ / ನಾನು ಬದುಕುತ್ತೇನೆ

ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...