Home / ಕಥೆ / ಕಿರು ಕಥೆ / ನಾನು ಬದುಕುತ್ತೇನೆ

ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ