Home / ಕಥೆ / ಕಿರು ಕಥೆ / ನಾನು ಬದುಕುತ್ತೇನೆ

ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...