Home / ಕವನ / ಕವಿತೆ / ಕೊರಗು

ಕೊರಗು

ಸತ್ತ ಕನಸನ್ನೆತ್ತಿ ಮತ್ತೆ ನೀರೆರೆದು
ಚಿಗುರಿಸಿದ ನೀರೆ ನೀನು ಯಾರೆ ?
ಮುಗಿಲಲ್ಲಿ ಅಲೆಸಿರುವ ಕೀಲುಕುದುರೆ, ನನ್ನ
ಅಮಲಿನಾಳದಲದ್ದಿದಂಥ ಮದಿರೆ.

ಉರಿವ ಬಿಸಿಲಿಗೆ ತಂಪುಗಾಳಿ ಸುಳಿಸಿ
ಮಣ್ಣಲ್ಲಿ ಮೋಡಗಳ ಬಣ್ಣ ಕಲೆಸಿ
ಮಾತ ಮರ್ಜಿಗೆ ಸಿಗದ ಉರಿಯ ಚಿಗುರುಗಳನ್ನ
ಕಣ್ಣಲ್ಲಿ ನಿಲಿಸಿ
ಬೊಗಸೆ ಮುಖದಲಿ ಮನಸ ಮೊಗೆದು ಸುರಿವ
ನೀನು ಯಾರೆ ಚೆಲುವೆ,
ನೀನು ಯಾರೆ?
ನೀ ಬಂದು ನಿಂತೆಯೋ ಎದುರು
ಹಾರಿಹೋಗುವುದಲ್ಲ ಪರಿವೆ.

ಬಿದ್ದ ದೇವಾಲಯದ ನವರಂಗ ಮಂಟಪಕೆ
ಮತ್ತೆ ಜೀರ್ಣೋದ್ಧಾರ ನಡೆಸಿದವಳೆ,
ಈ ಕಾಡಲ್ಲಿ
ದಾರಿ ಹುಡುಕಿದೆ ಹೇಗೆ ಚದುರೆ?

ದಾರಿ ಹುಡುಕಿದೆ ಹೇಗೆ ಚದುರೆ ಈ ಕಾಡಲ್ಲಿ
ನೂರು ನೋವು ಕಾಲ ಕಚ್ಚುವಲ್ಲಿ?
ಇಷ್ಟು ನಡೆದರು ದಾರಿ ಹುಡುಕಿ ಬಂದೀ ಗುಡಿಗೆ
ಬರಲೊಲ್ಲೆ ನಿಂತಿರುವೆ ಬಾಗಿಲಲ್ಲಿ.

ಮತ್ತೆ ಬೆಳಗಿದ ದೀಪ, ಮುಖವನೆತ್ತಿದ ಶಿಲ್ಪ
ಪೂಜೆ ಆರತಿ ಶಂಖ ಜಾಗಟೆದನಿ
ನಲಿವು ಮಡುಗಟ್ಟಿ ನಿಂತಿದೆ ಗರ್ಭಗುಡಿಯಲ್ಲಿ,
ನೀನೊ ನಾಲ್ಕಡಿ ಆಚೆ ದೂರದಲ್ಲಿ.

ಕರೆದೀತು ಹೇಗೆ ಕಲ್ಲದೇವರು ಬಳಿಗೆ?
ಕರೆದಿರೂ ನೀ ಹೋಗುವವಳಲ್ಲ ಒಳಗೆ,
ಸತ್ತ ಬದುಕನ್ನೆತ್ತಿ ನಿಲ್ಲಿಸಿದ ಒಲವಿಗೆ
ಮೌನದಲ್ಲೆ ಎಲ್ಲ ಕೃತಜ್ಞತೆ ಕಡೆಗೆ.
*****
ದೀಪಿಕಾ ಕವನಗುಚ್ಛ

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...