Home / ಕವನ / ಕವಿತೆ / ಕೊರಗು

ಕೊರಗು

ಸತ್ತ ಕನಸನ್ನೆತ್ತಿ ಮತ್ತೆ ನೀರೆರೆದು
ಚಿಗುರಿಸಿದ ನೀರೆ ನೀನು ಯಾರೆ ?
ಮುಗಿಲಲ್ಲಿ ಅಲೆಸಿರುವ ಕೀಲುಕುದುರೆ, ನನ್ನ
ಅಮಲಿನಾಳದಲದ್ದಿದಂಥ ಮದಿರೆ.

ಉರಿವ ಬಿಸಿಲಿಗೆ ತಂಪುಗಾಳಿ ಸುಳಿಸಿ
ಮಣ್ಣಲ್ಲಿ ಮೋಡಗಳ ಬಣ್ಣ ಕಲೆಸಿ
ಮಾತ ಮರ್ಜಿಗೆ ಸಿಗದ ಉರಿಯ ಚಿಗುರುಗಳನ್ನ
ಕಣ್ಣಲ್ಲಿ ನಿಲಿಸಿ
ಬೊಗಸೆ ಮುಖದಲಿ ಮನಸ ಮೊಗೆದು ಸುರಿವ
ನೀನು ಯಾರೆ ಚೆಲುವೆ,
ನೀನು ಯಾರೆ?
ನೀ ಬಂದು ನಿಂತೆಯೋ ಎದುರು
ಹಾರಿಹೋಗುವುದಲ್ಲ ಪರಿವೆ.

ಬಿದ್ದ ದೇವಾಲಯದ ನವರಂಗ ಮಂಟಪಕೆ
ಮತ್ತೆ ಜೀರ್ಣೋದ್ಧಾರ ನಡೆಸಿದವಳೆ,
ಈ ಕಾಡಲ್ಲಿ
ದಾರಿ ಹುಡುಕಿದೆ ಹೇಗೆ ಚದುರೆ?

ದಾರಿ ಹುಡುಕಿದೆ ಹೇಗೆ ಚದುರೆ ಈ ಕಾಡಲ್ಲಿ
ನೂರು ನೋವು ಕಾಲ ಕಚ್ಚುವಲ್ಲಿ?
ಇಷ್ಟು ನಡೆದರು ದಾರಿ ಹುಡುಕಿ ಬಂದೀ ಗುಡಿಗೆ
ಬರಲೊಲ್ಲೆ ನಿಂತಿರುವೆ ಬಾಗಿಲಲ್ಲಿ.

ಮತ್ತೆ ಬೆಳಗಿದ ದೀಪ, ಮುಖವನೆತ್ತಿದ ಶಿಲ್ಪ
ಪೂಜೆ ಆರತಿ ಶಂಖ ಜಾಗಟೆದನಿ
ನಲಿವು ಮಡುಗಟ್ಟಿ ನಿಂತಿದೆ ಗರ್ಭಗುಡಿಯಲ್ಲಿ,
ನೀನೊ ನಾಲ್ಕಡಿ ಆಚೆ ದೂರದಲ್ಲಿ.

ಕರೆದೀತು ಹೇಗೆ ಕಲ್ಲದೇವರು ಬಳಿಗೆ?
ಕರೆದಿರೂ ನೀ ಹೋಗುವವಳಲ್ಲ ಒಳಗೆ,
ಸತ್ತ ಬದುಕನ್ನೆತ್ತಿ ನಿಲ್ಲಿಸಿದ ಒಲವಿಗೆ
ಮೌನದಲ್ಲೆ ಎಲ್ಲ ಕೃತಜ್ಞತೆ ಕಡೆಗೆ.
*****
ದೀಪಿಕಾ ಕವನಗುಚ್ಛ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...