Home / ಕವನ / ಕವಿತೆ / ಅಹವಾಲು

ಅಹವಾಲು

ಸರಿಯೇನೆ ದೀಪಿಕಾ ಇದು ಸರಿಯೇನೇ?
ಈ ಜಂಭ, ನಾಲಿಗೆಯಲಿ ಬೆನ್ನಿರಿಯುವ ಉರಿವ್ಯಂಗ್ಯ
ಅಡಬಹುದೇನೇ ದೀಪಿಕಾ ಕಾಡಬಹುದೇನೇ?
ಮಾತಲ್ಲಿ ಕೂದಲು ಸೀಳಿ ಬಗೆಯಬಹುದೇನೇ ಎದೆಯ
ನನ್ನ ಮನೆಯಲ್ಲೇ ನನ್ನ
ಹುಗಿಯಬಹುದೇನೇ?

ಇಲ್ಲವೆ, ಕೈಗೆ ಬಿದ್ದರೂ ನಾ ಕೇಳದೆ ಹಣ್ಣು ಸುಲಿಯುವುದಿಲ್ಲವೆ,
ಮಾರುಗಾಲಿದ್ದರೂ ನಿನ್ನ ನೀತಿಯ ಕಂದರ ಜಿಗಿಯುವುದಿಲ್ಲವೆ.
ನಿನ್ನ ಕಣ್ಣಬೆಳಕಲ್ಲಿ ನಾಲ್ಕು ಕನಸು ಹಚ್ಚಿಕೊಳ್ಳುತ್ತೇನೆ
ನಿನ್ನ ತುಟಿರಂಗಿನಲ್ಲಿ ನನ್ನ ಹೃದಯ ಸ್ವಲ್ಪ ತೊಳೆಯುತ್ತೇನೆ
ನಿನ್ನ ಜಡೆಯಲ್ಲೇ ಅಡಿಸಿಕ್ಕಿ ಒದ್ದಾಡುವ ನನ್ನ ಕಲ್ಪನೆಗೆ
ಅಲ್ಲೇ ಆ ನುಣುಪುಗಲ್ಲದ ಮೇಲೇ ಮಲಗಿಬಿಡು ಮರಿ ಎನ್ನುತ್ತೇನೆ.

ನಿನ್ನ ಒಂದೊಂದು ಮಾತೂ ಕಿವಿಯಲ್ಲಿ ಕೂತು
ನೂರು ಅರ್ಥ ಬಿಚ್ಚುತ್ತದೆ,
ಕಚ್ಚುತ್ತದೆ ಎದೆಯೊಳಗೆ ಯಾವುದೋ ಮಿದುಭಾಗವನ್ನ
ಗೆಜ್ಜೆಕಟ್ಟಿ ಜೀವ ಕಾಲು ಬಡಿಯುತ್ತದೆ
ತೋಟಕ್ಕೆಲ್ಲ ನೀರು ನುಗ್ಗಿ
ಬಾಳೆಯಗೊನೆ ನೆಲಕ್ಕೆ ಜಗ್ಗಿ
ಉರುಹೊಡೆದ ಎಲ್ಲ ಮಗ್ಗಿ ಮರೆತುಹೋಗುತ್ತದೆ.

ನೀ ಬರುವಾಗ ನಿನ್ನ ಸಮಾಜನೀತಿಯನ್ನೆಲ್ಲ ಉಟ್ಟು ಬರುವುದ?
ಅದರ ಮೈಗಾವಲಲ್ಲಿ ಒರಗಿ ಕಣ್ಣಲ್ಲಿ ಹಣ್ಣಿನಂಗಡಿ ತೆರೆಯುವುದ?
ಉರಿಮಾತೋ ನರಿಮಾತೋ ಆಡಿ
ಮಾಸುತ್ತಿರುವ ನೀತಿಯ ಗೆರೆ ತೀಡಿ
ನೀರಲ್ಲಿ ಕುಣಿಯುವ ಮೀನನ್ನ ದಡಕ್ಕೆ ಎಸೆಯುವುದ?

ಒಂದು ದಿನ ಈ ಕಂದರಕ್ಕೆ
ನೀನೇ ಕಲ್ಲು ಹಾಕುತ್ತೀಯ ದೀಪಿಕಾ;
ಗುದ್ದಲಿ ಹಿಡಿದು ಇಡೀ ದಿನ ಅಗೆದು
ನೀನೇ ಮಣ್ಣು ಎಳೆಯುತ್ತೀಯ.
ಆಗ ಗುಲಾಬಿ ತೋಟಕ್ಕೆ ನುಗ್ಗುತ್ತೇನೆ,
ಗೊಂಚಲು ಗೊಂಚಲನ್ನೇ ತಬ್ಬುತ್ತೇನೆ.
ಹಚ್ಚಿಕೊಂಡ ಹಿಲಾಲಿನಲ್ಲಿ
ಕತ್ತಲೆಯನ್ನು ಬೆತ್ತಲೆ ಸುಡುತ್ತೇನೆ.
*****
ದೀಪಿಕಾ ಕವನಗುಚ್ಛ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...