Home / ಕವನ / ಕವಿತೆ / ದೀಪಿಕಾ – ಸ್ವಗತ

ದೀಪಿಕಾ – ಸ್ವಗತ

ಯಾಕೆ ಈ ಆನಂದ ಕಾಡುತ್ತಾನೋ ಹೀಗೆ
ಆಡುತ್ತಾನೆ ಆಡುತ್ತಾನೆ ಆಡುತ್ತಾನೆ ದೇವರೇ
ನಡುಬೀದಿಯಲ್ಲಿ ಬಟ್ಟೆ ಎಳೆದ ಹಾಗೆ ಥಟ್ಟನೆ
ಕಿಬ್ಬೊಟ್ಟೆ ಮೇಲೆ ಕೈಯಿಟ್ಟಂತೆ ಫಕ್ಕನೆ!
ಒಳಗೆ ಕತ್ತಲೆಯಲ್ಲಿ ಹುಗಿದ ಗುಟ್ಟಿಗೆ ಕಡ್ಡಿ ಗೀರಿ
ಭಾರಿ ಪಟಾಕಿ ಸಿಡಿಸಿ ಬೆಚ್ಚಿಸುತ್ತಾನೆ
ರೇಗಿದರು ಹೊರಗೆ ಕತ್ತಲು ಮುಚ್ಚಿದೊಳಗೆ
ಸಣ್ಣ ದೀಪಾವಳಿ
ಮುಖದ ಮೇಲೆಲ್ಲ ಬೆವರಿನ ಕಡಲೆ ಹನಿಮೂಡಿ
ನೆನೆಸಿಕೊಂಡರೆ ಈಗ ತಂಗಾಳಿ.

ಆಡುತ್ತ ಆಡುತ್ತ ಬೇಲಿದಾಟಿದ ಮಾತ
ನಾಲಿಗೆಯ ಮೇಲೆ ಎದೆ ಹಿಂಡಿ ಹರವುತ್ತಾನೆ,
ಹಾಡುತ್ತ ಹಾಡುತ್ತ ಹಂಸಧ್ವನಿಯ ಬಿಟ್ಟು
ಕಾಮವರ್ಧಿನಿ ಕಡೆಗೆ ಕೊರಳಾಗುತ್ತಾನೆ,
ಕಣ್ಣಲ್ಲಿ ಬ್ಲೇಡಿಟ್ಟು ಕಳ್ಳವೇಷಗಳನ್ನ
ಗೀರಿಕೊಯ್ಯುತ್ತಾನೆ ಮಾತಿನಲ್ಲೆ,
ಕತ್ತಿನ ಕಣ್ಣಿಯ ಕಿತ್ತು ಹುಟ್ಟಿದ ಹೊತ್ತಿಗೆ ಮುಟ್ಟಿಸಿ
ಪೂರ ತುಂಬಿದ ಕೆರೆಯ ತೂಬು ತೆರೆಯುತ್ತಾನೆ.

ಹತ್ತಿರ ಬಂದಾಗ ಇವನು ಕಣ್ಣಲ್ಲಿ ಕತ್ತಿ ಹಿರಿದು
ಎದೆಗೆ ಎತ್ತಿಬಡಿದು ದೂರ ಓಡಿದ್ದೇನೆ,
ತುಟಿಯ ಕೊಂಕಿನಲ್ಲಿ ಥೂಛೀಗಳನ್ನು ಬರೆದು
ಬೆಕ್ಕಿನುಗುರಾಗಿ ಕತ್ತೆ ಪರಚಿದ್ದೇನೆ,
ಉರಿಮಾತ ಕಾರಿ ಬೆಂಕಿ ಬಾಣಲೆಯಲ್ಲಿ
ಕರಿಕಾಗುವಷ್ಟು ಬೇಯಿಸಿದ್ದೇನೆ;

ಆದರೂ ಈ ಭಂಡ
ಎಚ್ಚರಿದ್ದಾಗೆಲ್ಲ ಕೀಚಕನಾಗಿ ಕಂಡು
ರೆಪ್ಪೆ ಮುಚ್ಚಿದ ಗಳಿಗೆ ಕೊಳಲು ಹಿಡಿದು ಬಂದು
ಬಿಗಿಯಾಗಿ ಮುಚ್ಚಿದ್ದ ಎದೆಯೊಳಗೆ ಬಾಗಿ-
ಲುಗಳ ತೆರೆದಿದ್ದಾನೆ.
‘ಅಂತರಾಳಗಳಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡಿವ ಬೀಜಾಣುವ’ನ್ನ
ಹಿಡಿದೆತ್ತಿ ದಡದಲ್ಲಿ ನೀರು ಗೊಬ್ಬರ ಉಣಿಸಿ
ಕಾಮಕಸ್ತೂರಿವನ ಬೆಳಯಿಸಿದ್ದಾನೆ.
*****
ದೀಪಿಕಾ ಕವನಗುಚ್ಛ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...