Home / ಕಥೆ / ಕಿರು ಕಥೆ / ಸ್ವಂತದ್ದಲ್ಲ

ಸ್ವಂತದ್ದಲ್ಲ

ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ಸವಿಯತೊಡಗಿದ್ದರು ಜನ. ಬಡಿಸುವವರು ಲವಲವಿಕೆಯಿಂದ ಊಟದೆಲೆಯ ಕಡೆಗೆ ಗಮನ ಹರಿಸಿದ್ದರು.

ಊಟಕ್ಕೆ ಬಡಿಸುವವರಲ್ಲಿ ಒಬ್ಬ ಕೆಲವರ ಹತ್ತಿರಕ್ಕೆ ಬಂದು ಅತಿಯಾದ ಕಾಳಜಿ ವ್ಯಕ್ತಪಡಿಸಿ “ಹೊಟ್ಟೆ ತುಂಬಾ ಊಟ ಮಾಡಿರಿ, ನಾಚಿಕೆ ಮಾಡಿಕೊಳ್ಳಬೇಡಿರಿ” ಎನ್ನುವನು. “ಈ ವಯಸ್ಸಿನಲ್ಲಿ ಉಣ್ಣದಿದ್ದರೆ ಹೇಗೆ… ಇನ್ನಷ್ಟು ತಗೋರಿ” ಎಂದು ಬಡಿಸುವನು. “ನಿಮ್ಮ ಪಾಲಿನದು ಹಾಕಿದೆ… ಇದು ನನ್ನ ಪಾಲಿನದು. ಮದುವೆ ಊಟ ಇದು ಹೊಟ್ಟೆ ಬಿರಿವಂತೆ ಉಣ್ಣಬೇಕು” ಎಂದು ಅವರು ಅಡ್ಡಾಗಿಟ್ಟ ಕೈಕೊಸರಾಡಿ ಎಲೆಗೆ ಪದಾರ್ಥ ಹಾಕುವನು. “ನನ್ನ ಒತ್ತಾಯಕ್ಕಾದರೂ ಇಷ್ಟು ನೀಡಿಸಿಕೊಳ್ಳಬೇಕು”, “ನಾನು ಪ್ರೀತಿಯಿಂದ ಬಡಿಸುತ್ತೇನೆ ತಗೊಳ್ಳಿರಿ”. “ಇದು ನಿಮ್ಮನೆ ಅಂತ ತಿಳ್ಕೊಳ್ಳಿರಿ” ಇಂಥವೇ ಮಾತುಗಳಿಂದ ಜಬರದಸ್ತಾಗಿ ಸಾಲುಗಳ ನಡುವೆ ಓಡಾಡುತ್ತಿದ್ದ.

ಊಟ ಮಾಡುವವರು ಬೇಡ… ಬೇಡ… ಸಾಕು… ಸಾಕು… ಎಂದು ಎಲೆಯನ್ನು ಪಕ್ಕಕ್ಕೆ ಎತ್ತಿಕೊಂಡರು. ಅದರ ಮೇಲೆ ಅಡ್ಡ ಬಿದ್ದರೂ ಅವನು ಹಟ ಮಾಡಿ ನೀಡುತ್ತಿದ್ದ. ಯಾರಾದರೂ ಹೊಟ್ಟೆ ಹಿಡಿದಷ್ಟು ತಿಂದಾರು. ಅವನು ಒತ್ತಾಯ ಮಾಡಿ ನೀಡಿದ್ದೆಲ್ಲ ಎಂಜಲಾಗಿ ಎಲೆ ತುಂಬಿದ್ದನ್ನು ಕಂಡು ಒಬ್ಬ “ಬೇಡ ಅಂದ್ರೂ ಜುಲಾಮಿ ಮಾಡಿ ಇಷ್ಟು ಅನ್ನ ಆಹಾರ ಕೆಡಿಸುತ್ತಿದ್ದಾನಲ್ಲ ಈ ಮನುಷ್ಯ!” ಎಂದು ವಿಷಾದದಿಂದ ಪೇಚಾಡಿಕೊಂಡ. ಅವನ ಪಕ್ಕದಲ್ಲಿದ್ದವನು ತಟ್ಟನೆ ಉದ್ಗರಿಸಿದ “ಹಾಳು ಮಾಡದೆ ಏನು ಮಾಡಿಯಾನು? ಅದು ಅವನ ಸ್ವಂತದ್ದಲ್ಲ!”

*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...