Home / ಕಥೆ / ಕಿರು ಕಥೆ / ಸ್ವಂತದ್ದಲ್ಲ

ಸ್ವಂತದ್ದಲ್ಲ

ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ಸವಿಯತೊಡಗಿದ್ದರು ಜನ. ಬಡಿಸುವವರು ಲವಲವಿಕೆಯಿಂದ ಊಟದೆಲೆಯ ಕಡೆಗೆ ಗಮನ ಹರಿಸಿದ್ದರು.

ಊಟಕ್ಕೆ ಬಡಿಸುವವರಲ್ಲಿ ಒಬ್ಬ ಕೆಲವರ ಹತ್ತಿರಕ್ಕೆ ಬಂದು ಅತಿಯಾದ ಕಾಳಜಿ ವ್ಯಕ್ತಪಡಿಸಿ “ಹೊಟ್ಟೆ ತುಂಬಾ ಊಟ ಮಾಡಿರಿ, ನಾಚಿಕೆ ಮಾಡಿಕೊಳ್ಳಬೇಡಿರಿ” ಎನ್ನುವನು. “ಈ ವಯಸ್ಸಿನಲ್ಲಿ ಉಣ್ಣದಿದ್ದರೆ ಹೇಗೆ… ಇನ್ನಷ್ಟು ತಗೋರಿ” ಎಂದು ಬಡಿಸುವನು. “ನಿಮ್ಮ ಪಾಲಿನದು ಹಾಕಿದೆ… ಇದು ನನ್ನ ಪಾಲಿನದು. ಮದುವೆ ಊಟ ಇದು ಹೊಟ್ಟೆ ಬಿರಿವಂತೆ ಉಣ್ಣಬೇಕು” ಎಂದು ಅವರು ಅಡ್ಡಾಗಿಟ್ಟ ಕೈಕೊಸರಾಡಿ ಎಲೆಗೆ ಪದಾರ್ಥ ಹಾಕುವನು. “ನನ್ನ ಒತ್ತಾಯಕ್ಕಾದರೂ ಇಷ್ಟು ನೀಡಿಸಿಕೊಳ್ಳಬೇಕು”, “ನಾನು ಪ್ರೀತಿಯಿಂದ ಬಡಿಸುತ್ತೇನೆ ತಗೊಳ್ಳಿರಿ”. “ಇದು ನಿಮ್ಮನೆ ಅಂತ ತಿಳ್ಕೊಳ್ಳಿರಿ” ಇಂಥವೇ ಮಾತುಗಳಿಂದ ಜಬರದಸ್ತಾಗಿ ಸಾಲುಗಳ ನಡುವೆ ಓಡಾಡುತ್ತಿದ್ದ.

ಊಟ ಮಾಡುವವರು ಬೇಡ… ಬೇಡ… ಸಾಕು… ಸಾಕು… ಎಂದು ಎಲೆಯನ್ನು ಪಕ್ಕಕ್ಕೆ ಎತ್ತಿಕೊಂಡರು. ಅದರ ಮೇಲೆ ಅಡ್ಡ ಬಿದ್ದರೂ ಅವನು ಹಟ ಮಾಡಿ ನೀಡುತ್ತಿದ್ದ. ಯಾರಾದರೂ ಹೊಟ್ಟೆ ಹಿಡಿದಷ್ಟು ತಿಂದಾರು. ಅವನು ಒತ್ತಾಯ ಮಾಡಿ ನೀಡಿದ್ದೆಲ್ಲ ಎಂಜಲಾಗಿ ಎಲೆ ತುಂಬಿದ್ದನ್ನು ಕಂಡು ಒಬ್ಬ “ಬೇಡ ಅಂದ್ರೂ ಜುಲಾಮಿ ಮಾಡಿ ಇಷ್ಟು ಅನ್ನ ಆಹಾರ ಕೆಡಿಸುತ್ತಿದ್ದಾನಲ್ಲ ಈ ಮನುಷ್ಯ!” ಎಂದು ವಿಷಾದದಿಂದ ಪೇಚಾಡಿಕೊಂಡ. ಅವನ ಪಕ್ಕದಲ್ಲಿದ್ದವನು ತಟ್ಟನೆ ಉದ್ಗರಿಸಿದ “ಹಾಳು ಮಾಡದೆ ಏನು ಮಾಡಿಯಾನು? ಅದು ಅವನ ಸ್ವಂತದ್ದಲ್ಲ!”

*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...