Home / ಕಥೆ / ಕಿರು ಕಥೆ / ಸ್ವಂತದ್ದಲ್ಲ

ಸ್ವಂತದ್ದಲ್ಲ

ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ಸವಿಯತೊಡಗಿದ್ದರು ಜನ. ಬಡಿಸುವವರು ಲವಲವಿಕೆಯಿಂದ ಊಟದೆಲೆಯ ಕಡೆಗೆ ಗಮನ ಹರಿಸಿದ್ದರು.

ಊಟಕ್ಕೆ ಬಡಿಸುವವರಲ್ಲಿ ಒಬ್ಬ ಕೆಲವರ ಹತ್ತಿರಕ್ಕೆ ಬಂದು ಅತಿಯಾದ ಕಾಳಜಿ ವ್ಯಕ್ತಪಡಿಸಿ “ಹೊಟ್ಟೆ ತುಂಬಾ ಊಟ ಮಾಡಿರಿ, ನಾಚಿಕೆ ಮಾಡಿಕೊಳ್ಳಬೇಡಿರಿ” ಎನ್ನುವನು. “ಈ ವಯಸ್ಸಿನಲ್ಲಿ ಉಣ್ಣದಿದ್ದರೆ ಹೇಗೆ… ಇನ್ನಷ್ಟು ತಗೋರಿ” ಎಂದು ಬಡಿಸುವನು. “ನಿಮ್ಮ ಪಾಲಿನದು ಹಾಕಿದೆ… ಇದು ನನ್ನ ಪಾಲಿನದು. ಮದುವೆ ಊಟ ಇದು ಹೊಟ್ಟೆ ಬಿರಿವಂತೆ ಉಣ್ಣಬೇಕು” ಎಂದು ಅವರು ಅಡ್ಡಾಗಿಟ್ಟ ಕೈಕೊಸರಾಡಿ ಎಲೆಗೆ ಪದಾರ್ಥ ಹಾಕುವನು. “ನನ್ನ ಒತ್ತಾಯಕ್ಕಾದರೂ ಇಷ್ಟು ನೀಡಿಸಿಕೊಳ್ಳಬೇಕು”, “ನಾನು ಪ್ರೀತಿಯಿಂದ ಬಡಿಸುತ್ತೇನೆ ತಗೊಳ್ಳಿರಿ”. “ಇದು ನಿಮ್ಮನೆ ಅಂತ ತಿಳ್ಕೊಳ್ಳಿರಿ” ಇಂಥವೇ ಮಾತುಗಳಿಂದ ಜಬರದಸ್ತಾಗಿ ಸಾಲುಗಳ ನಡುವೆ ಓಡಾಡುತ್ತಿದ್ದ.

ಊಟ ಮಾಡುವವರು ಬೇಡ… ಬೇಡ… ಸಾಕು… ಸಾಕು… ಎಂದು ಎಲೆಯನ್ನು ಪಕ್ಕಕ್ಕೆ ಎತ್ತಿಕೊಂಡರು. ಅದರ ಮೇಲೆ ಅಡ್ಡ ಬಿದ್ದರೂ ಅವನು ಹಟ ಮಾಡಿ ನೀಡುತ್ತಿದ್ದ. ಯಾರಾದರೂ ಹೊಟ್ಟೆ ಹಿಡಿದಷ್ಟು ತಿಂದಾರು. ಅವನು ಒತ್ತಾಯ ಮಾಡಿ ನೀಡಿದ್ದೆಲ್ಲ ಎಂಜಲಾಗಿ ಎಲೆ ತುಂಬಿದ್ದನ್ನು ಕಂಡು ಒಬ್ಬ “ಬೇಡ ಅಂದ್ರೂ ಜುಲಾಮಿ ಮಾಡಿ ಇಷ್ಟು ಅನ್ನ ಆಹಾರ ಕೆಡಿಸುತ್ತಿದ್ದಾನಲ್ಲ ಈ ಮನುಷ್ಯ!” ಎಂದು ವಿಷಾದದಿಂದ ಪೇಚಾಡಿಕೊಂಡ. ಅವನ ಪಕ್ಕದಲ್ಲಿದ್ದವನು ತಟ್ಟನೆ ಉದ್ಗರಿಸಿದ “ಹಾಳು ಮಾಡದೆ ಏನು ಮಾಡಿಯಾನು? ಅದು ಅವನ ಸ್ವಂತದ್ದಲ್ಲ!”

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...