Home / ಕಥೆ / ಕಿರು ಕಥೆ / ಸ್ವಂತದ್ದಲ್ಲ

ಸ್ವಂತದ್ದಲ್ಲ

ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ಸವಿಯತೊಡಗಿದ್ದರು ಜನ. ಬಡಿಸುವವರು ಲವಲವಿಕೆಯಿಂದ ಊಟದೆಲೆಯ ಕಡೆಗೆ ಗಮನ ಹರಿಸಿದ್ದರು.

ಊಟಕ್ಕೆ ಬಡಿಸುವವರಲ್ಲಿ ಒಬ್ಬ ಕೆಲವರ ಹತ್ತಿರಕ್ಕೆ ಬಂದು ಅತಿಯಾದ ಕಾಳಜಿ ವ್ಯಕ್ತಪಡಿಸಿ “ಹೊಟ್ಟೆ ತುಂಬಾ ಊಟ ಮಾಡಿರಿ, ನಾಚಿಕೆ ಮಾಡಿಕೊಳ್ಳಬೇಡಿರಿ” ಎನ್ನುವನು. “ಈ ವಯಸ್ಸಿನಲ್ಲಿ ಉಣ್ಣದಿದ್ದರೆ ಹೇಗೆ… ಇನ್ನಷ್ಟು ತಗೋರಿ” ಎಂದು ಬಡಿಸುವನು. “ನಿಮ್ಮ ಪಾಲಿನದು ಹಾಕಿದೆ… ಇದು ನನ್ನ ಪಾಲಿನದು. ಮದುವೆ ಊಟ ಇದು ಹೊಟ್ಟೆ ಬಿರಿವಂತೆ ಉಣ್ಣಬೇಕು” ಎಂದು ಅವರು ಅಡ್ಡಾಗಿಟ್ಟ ಕೈಕೊಸರಾಡಿ ಎಲೆಗೆ ಪದಾರ್ಥ ಹಾಕುವನು. “ನನ್ನ ಒತ್ತಾಯಕ್ಕಾದರೂ ಇಷ್ಟು ನೀಡಿಸಿಕೊಳ್ಳಬೇಕು”, “ನಾನು ಪ್ರೀತಿಯಿಂದ ಬಡಿಸುತ್ತೇನೆ ತಗೊಳ್ಳಿರಿ”. “ಇದು ನಿಮ್ಮನೆ ಅಂತ ತಿಳ್ಕೊಳ್ಳಿರಿ” ಇಂಥವೇ ಮಾತುಗಳಿಂದ ಜಬರದಸ್ತಾಗಿ ಸಾಲುಗಳ ನಡುವೆ ಓಡಾಡುತ್ತಿದ್ದ.

ಊಟ ಮಾಡುವವರು ಬೇಡ… ಬೇಡ… ಸಾಕು… ಸಾಕು… ಎಂದು ಎಲೆಯನ್ನು ಪಕ್ಕಕ್ಕೆ ಎತ್ತಿಕೊಂಡರು. ಅದರ ಮೇಲೆ ಅಡ್ಡ ಬಿದ್ದರೂ ಅವನು ಹಟ ಮಾಡಿ ನೀಡುತ್ತಿದ್ದ. ಯಾರಾದರೂ ಹೊಟ್ಟೆ ಹಿಡಿದಷ್ಟು ತಿಂದಾರು. ಅವನು ಒತ್ತಾಯ ಮಾಡಿ ನೀಡಿದ್ದೆಲ್ಲ ಎಂಜಲಾಗಿ ಎಲೆ ತುಂಬಿದ್ದನ್ನು ಕಂಡು ಒಬ್ಬ “ಬೇಡ ಅಂದ್ರೂ ಜುಲಾಮಿ ಮಾಡಿ ಇಷ್ಟು ಅನ್ನ ಆಹಾರ ಕೆಡಿಸುತ್ತಿದ್ದಾನಲ್ಲ ಈ ಮನುಷ್ಯ!” ಎಂದು ವಿಷಾದದಿಂದ ಪೇಚಾಡಿಕೊಂಡ. ಅವನ ಪಕ್ಕದಲ್ಲಿದ್ದವನು ತಟ್ಟನೆ ಉದ್ಗರಿಸಿದ “ಹಾಳು ಮಾಡದೆ ಏನು ಮಾಡಿಯಾನು? ಅದು ಅವನ ಸ್ವಂತದ್ದಲ್ಲ!”

*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...