Home / ಕವನ / ಕವಿತೆ / ಧವಳಪುರದ ಪವಾಡ

ಧವಳಪುರದ ಪವಾಡ

ಹಾರುವ ವಿಮಾನ ಹಾಗೇ ಹದ್ದಾಗಿ ಹೋದರೆ ಗತಿ?
ಗಡಿ ರಕ್ಷಿಸಿಯಾಯಿತಲ್ಲ!
ತೊಟ್ಟ ಬಟ್ನೆಗಳೇ ಥಟ್ಟನೆ ಇಲ್ಲವೆನ್ನಿ
ಏಕಾಂತದಲ್ಲೆ ಮಾನವೆಲ್ಲ!
ಧವಳಪುರದಲ್ಲಿ ಇಂಥ ಆಟಂಬಾಂಬ್ ಅಲ್ಲದಿದ್ದರೂ
ಚಿನಕುರಳಿ ಸಿಡಿಯುತ್ತವೆ.
ಮಾಮೂಲು ಬದುಕಿನ ಒಂದು ಕೂದಲು ಕೊಂಕದಿದ್ದರೂ
ಬುದ್ಧಿಗೆ ಶೀರ್ಷಾಸನ ಮಾಡಿಸುವ
ಸಾವಿರ ಪವಾಡ ಜರುಗುತ್ತವೆ.

ಕಲ್ಯಾಣನಗರಿಯ ಕಾಲಿಗೇ
ಕೈಜೋಡಿಸಿ ನಿಂತಿದೆ ಧವಳಪುರ,
ಆಳುಕಾಳು ಅದ್ಧೂರಿ ಭವನ
ಚಟಿಕಿ ಸದ್ದಿಗೆ ಸುಳಿವ ಮಣ ಮಣ ಕಾಗದ ಹಣ;
ಖಾಯಿಲೆ ಮಗುವಿನ ತಾಯಿ
ಚುನಾವಣೆಗೆ ನಿಂತ ನಾಯಿ
ಮಾರ್ಕಿನ ತಿಮ್ಮಾಬೋವಿಯ
ಆಕಳಿಸಿದ ಅದೆ ಮಾರ್ಕಿನ ಬಾಯಿ;
ಮೈಲಿ ಕ್ಯೂ ಕಾರು
ಹೊಸಾ ಹೊಸ ಕಾಣಿಕೆ ಮಾಲು
ಸತಿಸುತ ಸರ್ವಿಸುಗಳ ಋಣ ಸಲ್ಲಿಸಿ
ಪಾದಪೂಜೆಗೆ ಕಾದ
ಕನ್ನಡ ಕವಿತಿಲಕಗಳ ಸೀನಿಯಾರಿಟಿ ಪ್ರಕಾರದ ಸಾಲು
ಭಜನೆ ಭಂಗಿಗೆ ಹಠಾತ್ ಪ್ರಾಪ್ತವಾಗಿ
ಕೂಗುತಿದೆ ಭಕ್ತಗಣ ಎತ್ತುಗೊರಳಲ್ಲಿ;
ಎಲ್ಲ ಮಿಥ್ಯ ನೀನೇ ಸತ್ಯ ಸಾಯಿ ಸೋ
ಇಲ್ಲ ಬಾಳಿಸೋ

ಧವಳಪುರದಲ್ಲಿ ದಿನದಿನವು ಭಾರಿಪವಾಡ;
ಹಾವಿಗೆ ಓಡುವ ಗರುಡ
ಕಾಯಿ ಒಡೆದರೆ ಒಳಗೆ ಪರಿಮಳಿಸುವ ಮರುಗ
ಮುಕ್ಕಣ್ಣನಾಗಿ ಮರಳಿದ ಹುಟ್ಟಾ ಕುರುಡ;
ಎಲ್ಲರ ಎದುರೆದುರೇ ಒನಕೆ ಚಿಗುರಿ
ತೆಂಗಿನ ಮರದಿಂದ ಬಾಳೇಹಣ್ಣು ಉದುರಿ
ತೆಂದು ಸುದ್ದಿ :
ಕರೆದ ಚಪ್ಪಲಿ ಶಾಲು ಖಾಲಿಹವೆಯಿಂದ
ಹಾಜರಿಯಾದದ್ದೇನೋ ಸ್ವಂತ ಬಾತ್ಮೀದಾರರ ವರದಿ.
ಮಂತ್ರಿಸಿದ ಬೂದಿ, ಪವಿತ್ರ ಖಾದಿ
ಬಡವರಿಗೆಂದೇ ಗಿರವಿಯಂಗಡಿ ತೆರೆದು
ಹಣ ಮರಳಿ ಪಡೆಯದ ಮಾರ್ವಾಡಿಯ ಗಾದಿ
ಎಲ್ಲ ಎಲೆ ಕಲೆಸಿ ಕೂತ ಆಧ್ಯಾತ್ಮದ ದಿಲ್ಲಿ ಈ ಜಾಗ
ಭಕ್ತಿಯಲ್ಲಿ ತಮ್ಮ ಸಲ್ಲಿಸಿಕೊಂಡ ಬಂಜೆಯರು
ಅಪವಾದವಿಲ್ಲದೆ ಫಲಿಸಿದ್ದಾರೆ ಇಲ್ಲಿ;
ಭದ್ರನಿಂತಿದೆ ಯೋಗಿಯ ಅಮೃತ ಹಸ್ತ
ಇಂದಿಗೂ ಭಕ್ತೆಯರ ಎದೆಯಾಳದಲ್ಲಿ.

ಇಲ್ಲಿ ಬಂದವರಲ್ಲಿ ಬಹಳ ಜನ ಕಳಿತವರು,
ಒಂದುದಿನ ತಡೆದಿದ್ದರೆ ಕೊಳೆತು ಹುಳಿಯುತ್ತಿದ್ದರು,
ಪೇಜು ಪ್ರೂಫಿಗೆ ಬಂದಿದ್ದಾರೆ ಈಗಾಗಲೆ;
ಅಲ್ಲಿ ತಲೆಕಟ್ಟು ಹಾಕಿ ಇಲ್ಲಿ ಹೊಕ್ಕಳು ಎಳೆದು ಉಲ್ಲಿ ಕೊಂಬುಸಿಗಿಸಿ
ಇಷ್ಟು ತಿದ್ದಿದರೆ,
ಅಚ್ಚಾಗಿ ಬೈಂಡಾಗಿ ಕೆಲಸ ಪೂರ್ತಿ ಖೈದಾಗಿ
ತಕ್ಕ ವ್ಯವಹಾರಕ್ಕೆ ಮುಕ್ತರೇ.

ಯುದ್ಧ ಪ್ರವಾಹ ಭಯಂಕರ ಭೂಕಂಪ,
ಹತೋಟಿ ದಾಟಿ ಬೆಳೆಯುವ ಭಾರತ ಜನಗಣ ರಂಪ
ಕ್ಕೆಲ್ಲ ಎಳ್ಳುನೀರು ಹಾಡಿ
ಧವಳಪುರದಲ್ಲಿ ಪಾದ ಹೂಡಿ
ಕಡಲೆಯಿಂದ ಹುರುಳಿ ಹುರುಳಿಯಿಂದ ಕಡಲೆ ತೆಗೆದು
ಕಡೆಗೆ ಎರಡೂ ಸಮವೇ ಉಳಿಯುವ ಜಾದು ನೋಡಿ
ಪುಳಕಿತ ಭಕ್ತವೃಂದ ಜಿಗಿದೆದ್ದು
ಜಯ ಹೇ ಜಯ ಹೇ ಎಂದು ಬೊಬ್ಬಿರಿದು-

ಆಹಾ!
ಎಲ್ಲಿದೆ ಸ್ವಾಮೀ ಇಂಥ ನಿರ್ಲಿಪ್ತತೆ!
ಮೋಕ್ಷಕ್ಕೆ ಒಂದೇ ದಿನ ಹಿಂದೆ ಸಾಧ್ಯ
ಈ ಪ್ರಶಾಂತತೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...