Home / ಕವನ / ಕವಿತೆ / ಧವಳಪುರದ ಪವಾಡ

ಧವಳಪುರದ ಪವಾಡ

ಹಾರುವ ವಿಮಾನ ಹಾಗೇ ಹದ್ದಾಗಿ ಹೋದರೆ ಗತಿ?
ಗಡಿ ರಕ್ಷಿಸಿಯಾಯಿತಲ್ಲ!
ತೊಟ್ಟ ಬಟ್ನೆಗಳೇ ಥಟ್ಟನೆ ಇಲ್ಲವೆನ್ನಿ
ಏಕಾಂತದಲ್ಲೆ ಮಾನವೆಲ್ಲ!
ಧವಳಪುರದಲ್ಲಿ ಇಂಥ ಆಟಂಬಾಂಬ್ ಅಲ್ಲದಿದ್ದರೂ
ಚಿನಕುರಳಿ ಸಿಡಿಯುತ್ತವೆ.
ಮಾಮೂಲು ಬದುಕಿನ ಒಂದು ಕೂದಲು ಕೊಂಕದಿದ್ದರೂ
ಬುದ್ಧಿಗೆ ಶೀರ್ಷಾಸನ ಮಾಡಿಸುವ
ಸಾವಿರ ಪವಾಡ ಜರುಗುತ್ತವೆ.

ಕಲ್ಯಾಣನಗರಿಯ ಕಾಲಿಗೇ
ಕೈಜೋಡಿಸಿ ನಿಂತಿದೆ ಧವಳಪುರ,
ಆಳುಕಾಳು ಅದ್ಧೂರಿ ಭವನ
ಚಟಿಕಿ ಸದ್ದಿಗೆ ಸುಳಿವ ಮಣ ಮಣ ಕಾಗದ ಹಣ;
ಖಾಯಿಲೆ ಮಗುವಿನ ತಾಯಿ
ಚುನಾವಣೆಗೆ ನಿಂತ ನಾಯಿ
ಮಾರ್ಕಿನ ತಿಮ್ಮಾಬೋವಿಯ
ಆಕಳಿಸಿದ ಅದೆ ಮಾರ್ಕಿನ ಬಾಯಿ;
ಮೈಲಿ ಕ್ಯೂ ಕಾರು
ಹೊಸಾ ಹೊಸ ಕಾಣಿಕೆ ಮಾಲು
ಸತಿಸುತ ಸರ್ವಿಸುಗಳ ಋಣ ಸಲ್ಲಿಸಿ
ಪಾದಪೂಜೆಗೆ ಕಾದ
ಕನ್ನಡ ಕವಿತಿಲಕಗಳ ಸೀನಿಯಾರಿಟಿ ಪ್ರಕಾರದ ಸಾಲು
ಭಜನೆ ಭಂಗಿಗೆ ಹಠಾತ್ ಪ್ರಾಪ್ತವಾಗಿ
ಕೂಗುತಿದೆ ಭಕ್ತಗಣ ಎತ್ತುಗೊರಳಲ್ಲಿ;
ಎಲ್ಲ ಮಿಥ್ಯ ನೀನೇ ಸತ್ಯ ಸಾಯಿ ಸೋ
ಇಲ್ಲ ಬಾಳಿಸೋ

ಧವಳಪುರದಲ್ಲಿ ದಿನದಿನವು ಭಾರಿಪವಾಡ;
ಹಾವಿಗೆ ಓಡುವ ಗರುಡ
ಕಾಯಿ ಒಡೆದರೆ ಒಳಗೆ ಪರಿಮಳಿಸುವ ಮರುಗ
ಮುಕ್ಕಣ್ಣನಾಗಿ ಮರಳಿದ ಹುಟ್ಟಾ ಕುರುಡ;
ಎಲ್ಲರ ಎದುರೆದುರೇ ಒನಕೆ ಚಿಗುರಿ
ತೆಂಗಿನ ಮರದಿಂದ ಬಾಳೇಹಣ್ಣು ಉದುರಿ
ತೆಂದು ಸುದ್ದಿ :
ಕರೆದ ಚಪ್ಪಲಿ ಶಾಲು ಖಾಲಿಹವೆಯಿಂದ
ಹಾಜರಿಯಾದದ್ದೇನೋ ಸ್ವಂತ ಬಾತ್ಮೀದಾರರ ವರದಿ.
ಮಂತ್ರಿಸಿದ ಬೂದಿ, ಪವಿತ್ರ ಖಾದಿ
ಬಡವರಿಗೆಂದೇ ಗಿರವಿಯಂಗಡಿ ತೆರೆದು
ಹಣ ಮರಳಿ ಪಡೆಯದ ಮಾರ್ವಾಡಿಯ ಗಾದಿ
ಎಲ್ಲ ಎಲೆ ಕಲೆಸಿ ಕೂತ ಆಧ್ಯಾತ್ಮದ ದಿಲ್ಲಿ ಈ ಜಾಗ
ಭಕ್ತಿಯಲ್ಲಿ ತಮ್ಮ ಸಲ್ಲಿಸಿಕೊಂಡ ಬಂಜೆಯರು
ಅಪವಾದವಿಲ್ಲದೆ ಫಲಿಸಿದ್ದಾರೆ ಇಲ್ಲಿ;
ಭದ್ರನಿಂತಿದೆ ಯೋಗಿಯ ಅಮೃತ ಹಸ್ತ
ಇಂದಿಗೂ ಭಕ್ತೆಯರ ಎದೆಯಾಳದಲ್ಲಿ.

ಇಲ್ಲಿ ಬಂದವರಲ್ಲಿ ಬಹಳ ಜನ ಕಳಿತವರು,
ಒಂದುದಿನ ತಡೆದಿದ್ದರೆ ಕೊಳೆತು ಹುಳಿಯುತ್ತಿದ್ದರು,
ಪೇಜು ಪ್ರೂಫಿಗೆ ಬಂದಿದ್ದಾರೆ ಈಗಾಗಲೆ;
ಅಲ್ಲಿ ತಲೆಕಟ್ಟು ಹಾಕಿ ಇಲ್ಲಿ ಹೊಕ್ಕಳು ಎಳೆದು ಉಲ್ಲಿ ಕೊಂಬುಸಿಗಿಸಿ
ಇಷ್ಟು ತಿದ್ದಿದರೆ,
ಅಚ್ಚಾಗಿ ಬೈಂಡಾಗಿ ಕೆಲಸ ಪೂರ್ತಿ ಖೈದಾಗಿ
ತಕ್ಕ ವ್ಯವಹಾರಕ್ಕೆ ಮುಕ್ತರೇ.

ಯುದ್ಧ ಪ್ರವಾಹ ಭಯಂಕರ ಭೂಕಂಪ,
ಹತೋಟಿ ದಾಟಿ ಬೆಳೆಯುವ ಭಾರತ ಜನಗಣ ರಂಪ
ಕ್ಕೆಲ್ಲ ಎಳ್ಳುನೀರು ಹಾಡಿ
ಧವಳಪುರದಲ್ಲಿ ಪಾದ ಹೂಡಿ
ಕಡಲೆಯಿಂದ ಹುರುಳಿ ಹುರುಳಿಯಿಂದ ಕಡಲೆ ತೆಗೆದು
ಕಡೆಗೆ ಎರಡೂ ಸಮವೇ ಉಳಿಯುವ ಜಾದು ನೋಡಿ
ಪುಳಕಿತ ಭಕ್ತವೃಂದ ಜಿಗಿದೆದ್ದು
ಜಯ ಹೇ ಜಯ ಹೇ ಎಂದು ಬೊಬ್ಬಿರಿದು-

ಆಹಾ!
ಎಲ್ಲಿದೆ ಸ್ವಾಮೀ ಇಂಥ ನಿರ್ಲಿಪ್ತತೆ!
ಮೋಕ್ಷಕ್ಕೆ ಒಂದೇ ದಿನ ಹಿಂದೆ ಸಾಧ್ಯ
ಈ ಪ್ರಶಾಂತತೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್