ಉತ್ತರಾಧಿಕಾರಿ

ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು.  ಅಧಿಕಾರದ ಸುಖ ಅನುಸರಿಸುವರು.  ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು.  ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು.

ದೇಶದ ರಾಜಕಾರಣಕ್ಕೆ ಅನಿವಾರ್ಯವೆನ್ನುವಂತಿದ್ದ ಅವರಿಗೆ ಇತ್ತಿತ್ತಲಾಗಿ ಸಕ್ಕೆ ಕಾಯಿಲೆ, ಹೃದಯ ಬೇನೆ, ಬೆನ್ನು ನೋವು, ಮಂಡಿ ಬೇನೆ, ಉಬ್ಬನ, ಗಂಟಲು ಬೇನೆ ಹೀಗೆ ವಿವಿಧ ಕಾಯಿಲೆಗಳು ಒಮ್ಮೆಲೆ ಅಕ್ರಮಿಸಿಕೊಂಡು ಅವರ ಜೀವದ ಸೊಗಸನ್ನೇ ಹಿಂಡಿ ಹಾಕಿದ್ದವು.  ಬೆನ್ನುವ ನೋವು, ಗಂಟಲು ನೋವಿನ ಚಿಕಿತ್ಸೆಗೆಂದು ಅವರು ಸರಕಾರಿ ಖರ್ಚಿನಲ್ಲಿ ವಿದೇಶಕ್ಕೂ ಹೋಗಿ ಬಂದಿದ್ದರು.  ವೈದ್ಯರು ಅವರಿಗೆ ಹಚ್ಚು ಮಾತಾಡದಿರಲು ಎಚ್ಚರಿಸಿದ್ದರು.  ತೆವಲುಗಳಿಂದ ದೂರವಿರಲು, ಆಹಾರದ ಬಗ್ಗೆ ಕಟ್ಟುನಿಟ್ಟು ಪಲಿಸಲು, ಹೇಳಿದ್ದೂ ಅಲ್ಲದೆ ಆವೇಶಕ್ಕೆ ಅವಕಾಶ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದ್ದರು.  ಅಮರಪ್ಪನವರು ತಮ್ಮ ಹತವೈಭವವನ್ನು ನೆನಪು ಮಾಡಿಕೊಳ್ಳುತ್ತ ಇರಬೇಕಾದ ಪರಿಸ್ಥಿತಿ ಒದಗಿತು.

ಕೊನೆಗೂ ತಮ್ಮ ಅಭಿಮಾನಿಗಳ ಸಮಾವೇಶವನ್ನು ನಡೆಸಿ ತಾವು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಘೋಷಿಸಿದರು.  ಕೂಡಿದ ಜನ ಬೇಸರದಿಂದ “ನಾವು ಅದಕ್ಕೆ ಅವಕಾಸ ನೀಡುವುದಿಲ್ಲ” ಎಂದರು.  “ನೀವೇ ನಮಗೆ ದಿಕ್ಕು ದೆಸೆ ನಮ್ಮನ್ನು ಅನಾಥರನ್ನಾಗಿ ಮಾಡಬೇಡಿರಿ” ಎಂದು ಗೋಳಾಡಿದರು.  ತಮ್ಮ ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ಮಾರು ಹೋದ ಅಮರಪ್ಪನವರು “ನಾನು ನಿಮ್ಮೊಂದಿಗೆ ಇರುತ್ತೇನೆ.  ನಿಮ್ಮೆಲ್ಲರ ಅನುಕೂಲಕ್ಕಾಗಿ ನನ್ನ ಉತ್ತರಾಧಿಕಾರಿಯೊಬ್ಬ ಇರುತ್ತಾನೆ.  ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಿಷ್ಠೆ, ಗೌರವ, ಅಭಿಮಾನದ ಬೆಂಬಲವನ್ನು ನೀವು ಅವನಿಗೂ ಕೊಡಬೇಕು.  ನಾನೆಂದರೆ ಅವನು;  ಅವನೆಂದರೆ ನಾನು ಎಂದು ತಿಳಿಯಬೇಕು” ಎಂದರು.

ಅವರು ಹಾಗೆ ಹೇಳುತ್ತಿರುವಂತೆ ವೇದಿಕೆಯ ಮೆಲಿದ್ದ ಐದಾರು ಯುವಕರ ಮುಖ ಅರಳಿಕೊಂಡವು.  ಅವರೆಲ್ಲ ಅಮರಪ್ಪನವರ ಖಾಸಾ ಆದ್ಮಿಗಳಾಗಿದ್ದರು.  ಹಗಲಿರುಳು ಅವರ ಏಳ್ಗೆಗಾಗಿ, ಪ್ರತಿಷ್ಠೆಗಾಗಿ ರಕ್ತ ಸುಟ್ಟುಕೊಂಡಿದ್ದರು.  ನಿಷ್ಠೆಯಿಂದ ಶ್ರಮಿಸಿದ್ದರು.  ಬದುಕು ಸವೆಸಿದ್ದರು.  ಅನೇಕ ಸಂದರ್ಭಗಳಲ್ಲಿ ಅಮರಪ್ಪ ಆ ತರುಣರ ಬಗ್ಗೆ ಮೆಚ್ಚುಗೆ ಮಾತು ಆಡುತ್ತ ನಾಯಕರನ್ನಾಗಿಸುವ ಆಸೆ ತೋರುತ್ತಲೇ ಬಂದಿದ್ದರು.  ಈಗ ಅಂಥ ಅವಕಶ ಬಂದೀತೆಂದು ತರುಣರು ಹಿಗ್ಗಿಕೊಂಡು ತಮ್ಮ ಗರಿಗರಿ ಅಂಗಿ ತೀಡಿಕೊಂಡು ಮೈಯೆಲ್ಲಾ ಕಿವಿಯಾಗಿ ಕುಳಿತರು.  ಅಮರಪ್ಪ ಅವರತ್ತ ದೃಷ್ಟಿ ಚೆಲ್ಲಿ ತಮ್ಮ ಉತ್ತರಾಧಿಆರಯಿನ್ನು ಸಾರಿಯೇ ಬಿಟ್ಟು “ಮಹಾಜನಗಳೆ, ನಿಮಗೆಲ್ಲರಿಗೂ ಇನ್ನು ಮುಂದೆ ನನ್ನ ಮಗನೆ ನಾಯಕ!”

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಲಕರ್ಣಿ ಕೊಟ್ಟ ಪಾವಲಿ ರೊಕ್ಕ
Next post ಚಂದನ ಗೀತ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys