Home / ಕಥೆ / ಕಿರು ಕಥೆ / ಉತ್ತರಾಧಿಕಾರಿ

ಉತ್ತರಾಧಿಕಾರಿ

ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು.  ಅಧಿಕಾರದ ಸುಖ ಅನುಸರಿಸುವರು.  ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು.  ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು.

ದೇಶದ ರಾಜಕಾರಣಕ್ಕೆ ಅನಿವಾರ್ಯವೆನ್ನುವಂತಿದ್ದ ಅವರಿಗೆ ಇತ್ತಿತ್ತಲಾಗಿ ಸಕ್ಕೆ ಕಾಯಿಲೆ, ಹೃದಯ ಬೇನೆ, ಬೆನ್ನು ನೋವು, ಮಂಡಿ ಬೇನೆ, ಉಬ್ಬನ, ಗಂಟಲು ಬೇನೆ ಹೀಗೆ ವಿವಿಧ ಕಾಯಿಲೆಗಳು ಒಮ್ಮೆಲೆ ಅಕ್ರಮಿಸಿಕೊಂಡು ಅವರ ಜೀವದ ಸೊಗಸನ್ನೇ ಹಿಂಡಿ ಹಾಕಿದ್ದವು.  ಬೆನ್ನುವ ನೋವು, ಗಂಟಲು ನೋವಿನ ಚಿಕಿತ್ಸೆಗೆಂದು ಅವರು ಸರಕಾರಿ ಖರ್ಚಿನಲ್ಲಿ ವಿದೇಶಕ್ಕೂ ಹೋಗಿ ಬಂದಿದ್ದರು.  ವೈದ್ಯರು ಅವರಿಗೆ ಹಚ್ಚು ಮಾತಾಡದಿರಲು ಎಚ್ಚರಿಸಿದ್ದರು.  ತೆವಲುಗಳಿಂದ ದೂರವಿರಲು, ಆಹಾರದ ಬಗ್ಗೆ ಕಟ್ಟುನಿಟ್ಟು ಪಲಿಸಲು, ಹೇಳಿದ್ದೂ ಅಲ್ಲದೆ ಆವೇಶಕ್ಕೆ ಅವಕಾಶ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದ್ದರು.  ಅಮರಪ್ಪನವರು ತಮ್ಮ ಹತವೈಭವವನ್ನು ನೆನಪು ಮಾಡಿಕೊಳ್ಳುತ್ತ ಇರಬೇಕಾದ ಪರಿಸ್ಥಿತಿ ಒದಗಿತು.

ಕೊನೆಗೂ ತಮ್ಮ ಅಭಿಮಾನಿಗಳ ಸಮಾವೇಶವನ್ನು ನಡೆಸಿ ತಾವು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಘೋಷಿಸಿದರು.  ಕೂಡಿದ ಜನ ಬೇಸರದಿಂದ “ನಾವು ಅದಕ್ಕೆ ಅವಕಾಸ ನೀಡುವುದಿಲ್ಲ” ಎಂದರು.  “ನೀವೇ ನಮಗೆ ದಿಕ್ಕು ದೆಸೆ ನಮ್ಮನ್ನು ಅನಾಥರನ್ನಾಗಿ ಮಾಡಬೇಡಿರಿ” ಎಂದು ಗೋಳಾಡಿದರು.  ತಮ್ಮ ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ಮಾರು ಹೋದ ಅಮರಪ್ಪನವರು “ನಾನು ನಿಮ್ಮೊಂದಿಗೆ ಇರುತ್ತೇನೆ.  ನಿಮ್ಮೆಲ್ಲರ ಅನುಕೂಲಕ್ಕಾಗಿ ನನ್ನ ಉತ್ತರಾಧಿಕಾರಿಯೊಬ್ಬ ಇರುತ್ತಾನೆ.  ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಿಷ್ಠೆ, ಗೌರವ, ಅಭಿಮಾನದ ಬೆಂಬಲವನ್ನು ನೀವು ಅವನಿಗೂ ಕೊಡಬೇಕು.  ನಾನೆಂದರೆ ಅವನು;  ಅವನೆಂದರೆ ನಾನು ಎಂದು ತಿಳಿಯಬೇಕು” ಎಂದರು.

ಅವರು ಹಾಗೆ ಹೇಳುತ್ತಿರುವಂತೆ ವೇದಿಕೆಯ ಮೆಲಿದ್ದ ಐದಾರು ಯುವಕರ ಮುಖ ಅರಳಿಕೊಂಡವು.  ಅವರೆಲ್ಲ ಅಮರಪ್ಪನವರ ಖಾಸಾ ಆದ್ಮಿಗಳಾಗಿದ್ದರು.  ಹಗಲಿರುಳು ಅವರ ಏಳ್ಗೆಗಾಗಿ, ಪ್ರತಿಷ್ಠೆಗಾಗಿ ರಕ್ತ ಸುಟ್ಟುಕೊಂಡಿದ್ದರು.  ನಿಷ್ಠೆಯಿಂದ ಶ್ರಮಿಸಿದ್ದರು.  ಬದುಕು ಸವೆಸಿದ್ದರು.  ಅನೇಕ ಸಂದರ್ಭಗಳಲ್ಲಿ ಅಮರಪ್ಪ ಆ ತರುಣರ ಬಗ್ಗೆ ಮೆಚ್ಚುಗೆ ಮಾತು ಆಡುತ್ತ ನಾಯಕರನ್ನಾಗಿಸುವ ಆಸೆ ತೋರುತ್ತಲೇ ಬಂದಿದ್ದರು.  ಈಗ ಅಂಥ ಅವಕಶ ಬಂದೀತೆಂದು ತರುಣರು ಹಿಗ್ಗಿಕೊಂಡು ತಮ್ಮ ಗರಿಗರಿ ಅಂಗಿ ತೀಡಿಕೊಂಡು ಮೈಯೆಲ್ಲಾ ಕಿವಿಯಾಗಿ ಕುಳಿತರು.  ಅಮರಪ್ಪ ಅವರತ್ತ ದೃಷ್ಟಿ ಚೆಲ್ಲಿ ತಮ್ಮ ಉತ್ತರಾಧಿಆರಯಿನ್ನು ಸಾರಿಯೇ ಬಿಟ್ಟು “ಮಹಾಜನಗಳೆ, ನಿಮಗೆಲ್ಲರಿಗೂ ಇನ್ನು ಮುಂದೆ ನನ್ನ ಮಗನೆ ನಾಯಕ!”

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...