ದೊರಕುವದ್ಹಾಂಗ ಪರಮಾನಂದ

ದೊರಕುವದ್ಹಾಂಗ ಪರಮಾನಂದಾ
ಅರಿಯದು ಅದರಂದಾ
ದೊರೆಯದು ನಿನಗದು ಗುರುವರ
ಚರಣದ ಸೇವೆಯೊಳಕಾಗಿ ಬೆರೆಯದನಕಾ ||ಪ||

ಸರಸವಾದಖಿಳ ಭೋಗವನೆಲ್ಲಾ
ತ್ವರಿಸುವುದು ದುರಿತ ಕರ್ಮಗಳೆಲ್ಲಾ
ತೊರೆದು ಜನಕೆಲ್ಲ
ಕರುಣದಿ ಪರಮಸುಖದಾಯಕ ಗುರುವಿನ
ಕರಮಸ್ತಕದಲ್ಲಿ ಬೆರೆಯದಾತನಕ ||೧||

ಅರುವಿನೊಳ್ ಅಮಲ ಗುರುತವ ತೋರಿ
ಇರುವುದು ಆ ದಾರಿ
ಆರು ಮೂರು ಎರಡರ ದಾರಿ ಮೀರಿ
ನಿರುತದಿ ಸುಖಬೀರಿ
ಭಾರಿಯ ಪ್ರಣಯವು ಬೊರಿಡುತಲಿ ಮನ
ಸ್ಥಿರವಾಗಿಯೋನ್ಮನಿ ಸೇರದತನಕಾ ||೨||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಹೋಧವಾದೀತೆ ಆನಂದ
Next post ಬ್ರಹ್ಮಾನಂದದಿ ಮುಣಗ್ಯಾಡ್ವುದು ನೋಡು

ಸಣ್ಣ ಕತೆ

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…