ಗಣಪತಿ

ಹೊಗಳುವರು ಭಟ್ಟಂಗಿಗಳು ನಿನ
ಗಗಣಿತಾರೋಪಗಳ ಮಾಡುತ
ಹಗರಣದ ಕಾಮುಕರು ನಿನ್ನರಿತವರು ಅವರಲ್ಲ

ಸುಗುಣ ನಿರ್‍ಗುಣ ರೂಪ ನೀನೈ
ಜಗಕೆ ಮಂಗಳ ಕಾರಿ ನೀನೈ
ಮಗುಳೆ ನಮ್ಮಲಿ ಹೊಳೆವ ತೇಜವೆ! ಹೊರತೆ ನೀ ಯಮಗೆ

ನೊಂದಿ ಮೈತ್ರಿಯು ತಮದಲಿರುಳಲಿ
ಕಂದರೆಲ್ಲರು, ಕಂದಿ ತಮ್ಮೊಳ
ಗಿಂದು ನೊಂದಿಹರೆನುತ ಗಣಪನು ಗಿರಿಜೆಯೊಡಗೂಡಿ

ಬಂದು ನಿಂದಿಹ ನಿದುಗೊ! ಹೊಸಿಲಲಿ
ಒಂದೂಗೂಡಿಸಿ ನೊಂದ ಕರಗಳ
ಸಂದ ಪ್ರೇಮಾಂಜಲಿಯ ಪುಟದಲಿ ನೀಡಿರರ್ಘ್ಯವನು

ಮಳೆಯ ಕರೆಯಲು ಮೇಘ ಘಟೆಗಳು
ಬಳಲಿ ತೊಳಲಿದ ಧರಣಿ ತಣಿಯಲು
ಹೊಳೆಗಳೇರಲು ನರರು ಹರುಷಿಸೆ! ಪರಿಯನರಿಯದಲೆ

ಎಳೆಯ ಸುಳಿಗಳು ಪೂಗಳರಳಲು
ಇಳೆಯಕೇದಿಗೆ ಬಿರಿದು ಹೊಗಳಲು
ಸುಳಿದು ಸುಯ್ಯನೆ! ಗಾಳಿಯುಸರಿತು ಗಣಪ ಬರತಿಹನು

ಬರಹಗಾರರ ಗುರುವು ನೀನೈ
ಹರನ ಸುತ ಚಿರ ವಟುವು ನೀನೈ
ಹಿರಿದು ಸೇವೆಯ ಮಾಡಲೆಮಗರಿವಿತ್ತು ಸಲಹುತಿರು

ಇರವನಿಡು ಶಿವಸುಖದ ಬೆಳಕಲಿ
ಇರಿದು ಅಂಕುಶದಲ್ಲಿ ಶಂಕೆಯ
ಧರೆಯ ಸುಖಗಳ ಕರಿವೆ ಭಕುತಿಯಲೀವೆ ಮೋದಕವ

ಅರಿತು ನೋಡಲು ನಾಡ ಒಲುಮೆಗೆ
ಹರಿವ ವೀರ್‍ಯಕೆ ಭಾವಿ ಸೌಖ್ಯಕೆ
ಹರನ ಸುತ ಸ್ವಾತಂತ್ರಜೀವಿಗೆ ನೀನೆ ರಕ್ಷಕನು

ಭರತಮಾತೆಯ ಬೆಮರ ಮಣ್ಣೊಳ
ಗುರಿದಮೂರುತಿ ಭರತಗಣಪತಿಯೆ
ಅರಿತುನಿನ್ನನು ಭಜಿಸಿ ನಲಿವೆವು! ಜಗದ ಜನರೆಲ್ಲ

ನಡುವ ಬಿಗಿಯುವೆ ಪಾಶ ಬಂಧದಿ
ಹಿಡೆವನಂಕುಶ ಕೊಲಲು ಶಂಕೆಯ
ಒಡಲ ಕಟ್ಟುವೆ ಪರರ ಸೇವೆಗೆ ಪೊರೆವೆನಾರ್‍ತರನು

ಹಿಡಿವೆ ಲೇಖನಿ ಬರಿವೆ ಭಾರತ
ದೊಡಲ ಬೇಗೆಯ ಭವ್ಯ ಚರಿತೆಯ
ಒಡೆಯ! ಗಣಪನ ಮಾಡಲೆನ್ನನು ಘಳಿಗೆಯೋಲವಿನಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯತಿರಿಕ್ತ ವರ್ಣಗಾಥೆ
Next post ಕಟ್ಟಕಡೆಗೆ ಪ್ರೀತಿ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys