Home / ಕವನ / ಕವಿತೆ / ಗಣಪತಿ

ಗಣಪತಿ

ಹೊಗಳುವರು ಭಟ್ಟಂಗಿಗಳು ನಿನ
ಗಗಣಿತಾರೋಪಗಳ ಮಾಡುತ
ಹಗರಣದ ಕಾಮುಕರು ನಿನ್ನರಿತವರು ಅವರಲ್ಲ

ಸುಗುಣ ನಿರ್‍ಗುಣ ರೂಪ ನೀನೈ
ಜಗಕೆ ಮಂಗಳ ಕಾರಿ ನೀನೈ
ಮಗುಳೆ ನಮ್ಮಲಿ ಹೊಳೆವ ತೇಜವೆ! ಹೊರತೆ ನೀ ಯಮಗೆ

ನೊಂದಿ ಮೈತ್ರಿಯು ತಮದಲಿರುಳಲಿ
ಕಂದರೆಲ್ಲರು, ಕಂದಿ ತಮ್ಮೊಳ
ಗಿಂದು ನೊಂದಿಹರೆನುತ ಗಣಪನು ಗಿರಿಜೆಯೊಡಗೂಡಿ

ಬಂದು ನಿಂದಿಹ ನಿದುಗೊ! ಹೊಸಿಲಲಿ
ಒಂದೂಗೂಡಿಸಿ ನೊಂದ ಕರಗಳ
ಸಂದ ಪ್ರೇಮಾಂಜಲಿಯ ಪುಟದಲಿ ನೀಡಿರರ್ಘ್ಯವನು

ಮಳೆಯ ಕರೆಯಲು ಮೇಘ ಘಟೆಗಳು
ಬಳಲಿ ತೊಳಲಿದ ಧರಣಿ ತಣಿಯಲು
ಹೊಳೆಗಳೇರಲು ನರರು ಹರುಷಿಸೆ! ಪರಿಯನರಿಯದಲೆ

ಎಳೆಯ ಸುಳಿಗಳು ಪೂಗಳರಳಲು
ಇಳೆಯಕೇದಿಗೆ ಬಿರಿದು ಹೊಗಳಲು
ಸುಳಿದು ಸುಯ್ಯನೆ! ಗಾಳಿಯುಸರಿತು ಗಣಪ ಬರತಿಹನು

ಬರಹಗಾರರ ಗುರುವು ನೀನೈ
ಹರನ ಸುತ ಚಿರ ವಟುವು ನೀನೈ
ಹಿರಿದು ಸೇವೆಯ ಮಾಡಲೆಮಗರಿವಿತ್ತು ಸಲಹುತಿರು

ಇರವನಿಡು ಶಿವಸುಖದ ಬೆಳಕಲಿ
ಇರಿದು ಅಂಕುಶದಲ್ಲಿ ಶಂಕೆಯ
ಧರೆಯ ಸುಖಗಳ ಕರಿವೆ ಭಕುತಿಯಲೀವೆ ಮೋದಕವ

ಅರಿತು ನೋಡಲು ನಾಡ ಒಲುಮೆಗೆ
ಹರಿವ ವೀರ್‍ಯಕೆ ಭಾವಿ ಸೌಖ್ಯಕೆ
ಹರನ ಸುತ ಸ್ವಾತಂತ್ರಜೀವಿಗೆ ನೀನೆ ರಕ್ಷಕನು

ಭರತಮಾತೆಯ ಬೆಮರ ಮಣ್ಣೊಳ
ಗುರಿದಮೂರುತಿ ಭರತಗಣಪತಿಯೆ
ಅರಿತುನಿನ್ನನು ಭಜಿಸಿ ನಲಿವೆವು! ಜಗದ ಜನರೆಲ್ಲ

ನಡುವ ಬಿಗಿಯುವೆ ಪಾಶ ಬಂಧದಿ
ಹಿಡೆವನಂಕುಶ ಕೊಲಲು ಶಂಕೆಯ
ಒಡಲ ಕಟ್ಟುವೆ ಪರರ ಸೇವೆಗೆ ಪೊರೆವೆನಾರ್‍ತರನು

ಹಿಡಿವೆ ಲೇಖನಿ ಬರಿವೆ ಭಾರತ
ದೊಡಲ ಬೇಗೆಯ ಭವ್ಯ ಚರಿತೆಯ
ಒಡೆಯ! ಗಣಪನ ಮಾಡಲೆನ್ನನು ಘಳಿಗೆಯೋಲವಿನಲಿ
*****

Tagged:

Leave a Reply

Your email address will not be published. Required fields are marked *

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...