Home / ಕವನ / ಕವಿತೆ / ಯದುಮಣಿಯ ಜನುಮದಿನ

ಯದುಮಣಿಯ ಜನುಮದಿನ

ಯಾದವರ ಜಿವಸುಳಿ ವುರಿಗೆರೆಯು ಮೈಸೂರು
ಆದಿಯಲಿ ತೆಂಕಣಕೆ ಅಂಕಿತವ ನಿಡಲಿಳಿದು
ಮೇದಿನಿಯ ನಾಡಿಸಿದ ನಾಡಿಯಿದು ಬೆಳೆದಿಹುದು ದ್ವಾಪರದಿ ಕಲ್ಕಿಗೆನಲು

ಆದಿಯಿಂ ರಾಜ ಕಂಠೀರವರ ದೇವಚಾ
ಮೋದಧಿಯ ಚಂದ್ರ ಕೃಷ್ಣೇಂದ್ರನೆನೆ ಜ್ಯೋತಿಗಳ
ಮೋದದಲಿ ರಾಜಸಿರಿ ಹಾದಿಯಲಿ ಎಣಿಸಿಹಳು ಮಹಿಷರ ನೆನಹಿನಲ್ಲಿ

ದಳವಿ ನ್ನೊಂದರಳುತಲಿದೆ ನೋಡಿರಿ
ತಿಳಿಹೃದಯದ ತೆರೆ ತೆಗೆಯುತಲಿರುವುದು
ತಿಳಿ! ಯಾದವ ಶಕುತಿಯ ದಳವೆದ್ದಿತು! ಈ ದಿನ ಜನುಮದಿನ

ಸುಳಿಸುಳಿ ಕಂಪಿನ ಸುಳಿಯಲಿ ಪ್ರಜೆಗಳು
ಕಳಕಳ ರವದಲಿ ಕೂಡುತ ಹರಿದರು
ಇಳೆಯೊಳು ಹೊಸದಿನ ವೊಂದುರಿಯುತಲಿದೆ ಕಾಂತಿಯ ನೋಡೆನುತ

ವನವನಾಂ ತರದಿಂದ ಹೊರಸೂಸು ತಿರಸುರಭಿ
ಘನಪಥದಲತಿಥಿ ಜನ ಮನಮರೆದು ಸುಳಿಸುಳಿಯೆ
ಸನುಮತದ ಸುಳಿಯಿಡುತ ಚಿರದಿನದ ಗೆಳೆತನವು
ಬಲು ಬಿರಿದು ಸುರಿಯೆ ಮಧುವು

ಮನವರಳಿ ಕಂಪೊಗೆಯೆ ಮಹಿಷೂರ ನಾಡೊಳಗೆ
ಜನುಮದಿನ ಜನವಿದಕೆ! ಜನುಮದಿನ ಯಾದವರ
ಘನಜೋತಿಲತೆಗಿದುವೆ! ಜನುಮದಿನ ವೈಭವಕೆ!
ಜನುಮದಿನ! ಸುಖಶಾಂತಿಗೆ

ಜಗದಲಿ ಕೋಲಾ ಹಲವಿದು ಹೊಳಲಿಡೆ
ಚಿಗುರಲು ಹೊಸದಿನ ವರಳಲು ರವಿಸುಮ
ಬಗೆಬಗೆ ನಿಧಿಗಳ ನೊಗೆದಿಡೆ ಧರಣಿಯು ಕೈಗಾಣಿಕೆಯೆನುತ

ಮಿಗೆಸವಿ ಪುರುಳನು ಪ್ರಜೆಗಳು ತರುತಿರೆ
ಸೊಗೆಯಿಪ ನೆನಹವು ಹಾರುತಬರುತಿರೆ
ಗಗನಕೆ ನೆಗೆದಿತು ಹಳದಿನದಂಚೆಯು ಹೊಸದಿನ ದನಿಗೊಡಲು

ನುಂಗುತಲಿ ಮಲಗೆದ್ದು ಹಳೆದಿನದ ದುಗುಡಗಳ
ಸಂಗಡಲೆ ಚಿಗಿದೆದ್ದು ಗಂಡಭೇರುಂಡವದು
ಕಂಗಳಿರೆ ಭರವಸೆಯ ಜೋತಿಯೆರಡೆನುವಂತೆ ಮೀಯುತಿರೆ ಆಗಸದಲಿ

ಕೆಂಗಿರುಣದಲಿ ಮಿಂದು ಯದುಮಣಿಯ ಮನವಿಂದು
ಸಿಂಗರಿಸಿ ಕೈಬಿಗಿದ ಜನವೃಂದವನು ಬಿಗಿದು
ಕಂಗಳಾಹೊಳಹಿನಲಿ! ಕಂಬನಿಯ ಮಿಡಿಯೆ! ನವ
ಜೀವಕಾದಿಯಿದು! ಎನುತ

ಮಂಜುಳ ರವವೇ ನೆನ್ನುತ ಚಿನನ
ಕಂಜಗಳರಳಲು ಕೇಶವಗವಿಯಿಂ
ದಂಜುತ ಬರುತಲೆ ಗೊಂದಲ ವೇನನೆ! ಚಂಡಿಯು ನಸುನಗಲು

“ನಂಜಿನ ಕೋರೆಯು ಸಡಲಿವೆಕಾಲಗೆ!
ಆಂಜದಿರಂಜದಿರವಮುಳಿದರೆ! ನೀ”
ನಂಜನಗೂಡಲಿ ಧೈರ್ಯದ ನುಡಿಬರೆ ಕೊಂಡಿಯು ಸಡಲಿದವು

ದಿನದೇರು ಬಹಮುಂದೆ ಬಿಳಿಗೊಳದ ಕಳಶದಲಿ
ಹನಿಸಿಡುವೆ ಸೈಕತವ ಗೋದೆಯಲಿ ನಾಮಿಂದು
ಮನವಾಜಿಯೇರುತಲಿ ತುಂಬುವೆನು ತುಂಗೆಯಲಿ
ಭದ್ರೆಯಲಿ ಶುಭಜಲವನು

ವನಪಥವ ಕಾವೇರಿ ಬಿಡುವುದರ ಮುಮ್ಮುಂದೆ
ಹನಿಸಿಡುವೆ ಕಳಶಕ್ಕೆ! ಶಿರಿಯುಗದ ಜೀವನವ!
ಘನಪಾದವೆರಡನ್ನು ತೊಳೆಯುವೆನು ಬಾ! ವಿಭುವೆ!
ಕರುನಾಡ ಹೃದಯದಲ್ಲಿ

ನಲಿದೆದ್ದು ಹಂಪೆಯಲಿ ಶಿಖಿಯೆತ್ತೆ ಕೊಳಲನ್ನು
ಜಲ! ಜೋಗ ಪಾತ್ರದಲ್ಲಿ ಜಯಘೋಷ ಮಾಡುತಿರೆ
ತಿಳಿನೆನಹ ಗಂಗರಸ ಚಾಲುಕ್ಯ ಹೊಯ್ಸಳರು
ಶುಭದಿನವು ! ಸಾಧುವೆನಲು

ಅಲೆಯೆದ್ದು ತೀರಗಳ ನಪ್ಪುತಲೆ ಬೆಳೆಯಿರೆನೆ
ಕಳಕಳವು ಕಾಳೆಯಿಡಲರಿವಿನಟಿವಿಯ ದೂರಿ
ಘಳಿರನಿದೂ! ವೈತಾಳಿ! ಮಹಿಷೂರಮಂಗಳಕೆ
ಶ್ರೀ ಕೃಷ್ಣ ಏಳೆನುತಿದೆ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...