Home / ಕವನ / ಕವಿತೆ / ಕಂಕಣ

ಕಂಕಣ

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ
ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ
ಪಡುವಲಿನ ಹೊಡೆತದಲಿ
ವಡಲೊಡೆದು ಬೇರೆನಿಸಿ
|| ಸಡಲಿರಲು ಪ್ರೇಮಬಂಧ ||

ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ
ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು
ಮೃಡನಲ್ಲಿ ಬೇಡಿದೆನು
ಬಿಡುಯೆಂದು ಹಣೆಗಣ್ಣ
|| ಸುಡುಯೆಂದು ಸತ್ಯ ಕುರುಹ ||

ತಾಳಿದಾವೇಶಗಳು ಬಾಳದೆಯೆ ಅಳಿದಿಹುವು
ಬೀಳದಲೆ ತರ್ಪಣದ ಜಲ ಮೊಳೆಯುವುವೆ ಬೀಜ!
ಮೂಜಗದ ಭಂಡಾರ
ಸೋಜಿಗದ ಕರುನಾಡು
|| ಈ ಜಗದ ಚಿತ್ರ ಭಿತ್ತಿ ||

ಚಾಳೀಸೆ ಕಂಗಳಲಿ ಕಾಣಿಸವೆ ! ಕರುಹುಗಳು
ಸಾಲದೀವಿಗೆಯಿಟ್ಟು ತೋರಣವ ಸಿಂಗರಿಸಿ
ಸೋಗೆಗಂಗಳ ಭಾಗ್ಯ
ಬಾಗಿ ಬಳುಕುತ ಬಹಳು
|| ಈಗಲಿದೊ ಹರಕೆ ಫಲಿಸಿ ||

ಎಣಿಸುತಿದೆ ಹೆಜ್ಜೆಗಳ ಮಹಿಷರ ಶಿರವನ್ನು
ಚಿಣಿಚಿಣನೆ ಚಿಗಿದೋಡೆ ಧಾರ್ವಾಡ ಹೃದಯವದು
ಉರ್ವಿಯನು ಮೆಟ್ಟುವೆನು
ಓರ್ವನೆನೆ ದಕ್ಖಿಣನು
|| ಮರ್ಮದಲಿನಾಡು ಕರೆಯೆ ||

ಸೆಣಸಲೆನೆ ಭಾರತಿಗೆ ಕರ್ಣಾಟ ಖಡ್ಗವಿದೆ
ಹಣೆಗಿಡಲು ತಿಲಕಕ್ಕೆ ಕರುನಾಡ ಕತ್ತುರಿಯು
ತನ್ನಿರವ ನೋಡಲಿಕೆ ಕನ್ನಡದ ಕನ್ನ ಡಿಯು
|| ಇನ್ನುಂಟೆ ತಾಯ್ಗೆ ಕೊರತೆ ||

ಶರಧಿಗಳ ಸಂತವಿಸಿ ಹರಿದ ಕಾವ್ಯಗಳೆಲ್ಲಿ
ಚಿರದಿನಕೆ ಬೆಳಕೀವ ಲಾವಣ್ಯ ರೂಹೆಲ್ಲಿ
ಯಾವಲ್ಲಿ ಅಡಗಿಹವು
ಯಾವಗಿರಿ ಗುಹೆಯಲ್ಲಿ
|| ಭಾವನೆಗೆ ನಿಲುಕದಂತೆ ||

ಕರುನಾಡ ನಡುವಲಿದೆ, ಹೇಮಗಿರಿ ಅಡರದನು
ಹಿರಿಯರೆಮಗಿಟ್ಟಿರುವ ಭಂಡಾರ ನಿಲುಕುವುದು
ಕಂಡವನು ಕೆಳಗಿಳಿದು
ಮಂಡಲಕೆ ಬಿತ್ತಿದರೆ.
|| ಮಂಡಿಗೆಯ ಭೂಮ ಮಹಿಗೆ ||

ಪಾಳೆಯಗಳಲ್ಲಲ್ಲಿ ಅಲೆಯಿಟ್ಟ ನಾಡಲ್ಲಿ
ಏಳಿಗೆಯ ಕಂಪಿಲ್ಲ ಬೆಳವಿಗೆಯ ಸೊಂಪಿಲ್ಲ
ತಿಳಿವಿನಾ ಶಾಂತಿಯಲಿ
ಕೊಳೆಯುವುದು ದಿವ್ಯಛವಿ
|| ಇಳೆಯೆಲ್ಲ ಮೇಳೈಸಲು ||

ಏಳಿರೇಳೇಳಿರಿ ಬೇಲೂರ ಪುತ್ಥಳಿಯ
ಪೌಳಿಯನು ಹಂಪೆಯಲಿ, ತೊಳೆದಿಟ್ಟು ಎಲ್ಲೋರ
ತಿದ್ದಿಟ್ಟು ತಿಳಿರಂಗ
ಹೊತ್ತಿಟ್ಟು ಗೋದೆಯಲಿ
|| ಸುತ್ತಿಸುವ ತೆಪ್ಪೋತ್ಸವ ||

ಕೊಂಕಣರ ಶ್ರೀಧಾಟಿ ಪಡುವಣರ ಪದ ಸರಣಿ
ತೆಂಕಣರ ನಯನೀತಿ ನಡುವಣರ ಜೀವಕಳೆ
ಬೆಳೆಯಲಿದು ಕರುನಾಡು
ಬೆಳೆಸಿಡುವ ಗುಟ್ಟಿದುವೆ
|| ತಿಳಿದವರು ಕಂಡತೆರನು ||

ಬಹುದಿನದ ಕಾಂತಿಯಿದೆ ಶ್ರೀ ಕೃಷ್ಣ ರೂಪದಲಿ
ವಹಿಸಿರಿದ ಹೃದಯದಲಿ ಬೆಳೆವಹಿಯ ಸಜ್ಜೆಯಲಿ
ಬಾಳುವಿರಿ ಬಲು ದಿನದ
ಏಳಿಗೆಯ ಸೊಡರುರಿದು
|| ಕೇಳಿರಿದು ಬೆಳೆವ ಗುಟ್ಟು ||

ಮುಂದಿನಾ ಮಧು ಯುಗವು ಮೊಗ್ಗಿನೊಳಗಡಗಿಹುದು
ಮುಂದದನು ಆಳುವರು ನಿಮ್ಮೊಳಗೆ ಜನಿಸುವರು
ಬೊಮ್ಮ ವರ್ತನೆಯಲ್ಲಿ
ಮುಮ್ಮೊದಲು ಬೆಳೆದಿಹರು
|| ನಿಮ್ಮವರು ಹಿರಿಯರೆಲ್ಲ ||

ಒಂದಾಗಿರೊಂದಾಗಿ ಕಂಕಣದ ಬಂಧದಲಿ
ಒಂದಾಗಿ ಮುಂದಿರುತ ವಿಶ್ವಕರ್ಣಾಟಕ
ವಿಶ್ವಾಸದಾರತಿಯ
ವಿಶ್ವಕೆನಲೆತ್ತಲಿದು
||ಶ್ರೀ ವಿಶ್ವಕರ್ಣಾಟಕ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...