ಕಂಕಣ

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ
ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ
ಪಡುವಲಿನ ಹೊಡೆತದಲಿ
ವಡಲೊಡೆದು ಬೇರೆನಿಸಿ
|| ಸಡಲಿರಲು ಪ್ರೇಮಬಂಧ ||

ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ
ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು
ಮೃಡನಲ್ಲಿ ಬೇಡಿದೆನು
ಬಿಡುಯೆಂದು ಹಣೆಗಣ್ಣ
|| ಸುಡುಯೆಂದು ಸತ್ಯ ಕುರುಹ ||

ತಾಳಿದಾವೇಶಗಳು ಬಾಳದೆಯೆ ಅಳಿದಿಹುವು
ಬೀಳದಲೆ ತರ್ಪಣದ ಜಲ ಮೊಳೆಯುವುವೆ ಬೀಜ!
ಮೂಜಗದ ಭಂಡಾರ
ಸೋಜಿಗದ ಕರುನಾಡು
|| ಈ ಜಗದ ಚಿತ್ರ ಭಿತ್ತಿ ||

ಚಾಳೀಸೆ ಕಂಗಳಲಿ ಕಾಣಿಸವೆ ! ಕರುಹುಗಳು
ಸಾಲದೀವಿಗೆಯಿಟ್ಟು ತೋರಣವ ಸಿಂಗರಿಸಿ
ಸೋಗೆಗಂಗಳ ಭಾಗ್ಯ
ಬಾಗಿ ಬಳುಕುತ ಬಹಳು
|| ಈಗಲಿದೊ ಹರಕೆ ಫಲಿಸಿ ||

ಎಣಿಸುತಿದೆ ಹೆಜ್ಜೆಗಳ ಮಹಿಷರ ಶಿರವನ್ನು
ಚಿಣಿಚಿಣನೆ ಚಿಗಿದೋಡೆ ಧಾರ್ವಾಡ ಹೃದಯವದು
ಉರ್ವಿಯನು ಮೆಟ್ಟುವೆನು
ಓರ್ವನೆನೆ ದಕ್ಖಿಣನು
|| ಮರ್ಮದಲಿನಾಡು ಕರೆಯೆ ||

ಸೆಣಸಲೆನೆ ಭಾರತಿಗೆ ಕರ್ಣಾಟ ಖಡ್ಗವಿದೆ
ಹಣೆಗಿಡಲು ತಿಲಕಕ್ಕೆ ಕರುನಾಡ ಕತ್ತುರಿಯು
ತನ್ನಿರವ ನೋಡಲಿಕೆ ಕನ್ನಡದ ಕನ್ನ ಡಿಯು
|| ಇನ್ನುಂಟೆ ತಾಯ್ಗೆ ಕೊರತೆ ||

ಶರಧಿಗಳ ಸಂತವಿಸಿ ಹರಿದ ಕಾವ್ಯಗಳೆಲ್ಲಿ
ಚಿರದಿನಕೆ ಬೆಳಕೀವ ಲಾವಣ್ಯ ರೂಹೆಲ್ಲಿ
ಯಾವಲ್ಲಿ ಅಡಗಿಹವು
ಯಾವಗಿರಿ ಗುಹೆಯಲ್ಲಿ
|| ಭಾವನೆಗೆ ನಿಲುಕದಂತೆ ||

ಕರುನಾಡ ನಡುವಲಿದೆ, ಹೇಮಗಿರಿ ಅಡರದನು
ಹಿರಿಯರೆಮಗಿಟ್ಟಿರುವ ಭಂಡಾರ ನಿಲುಕುವುದು
ಕಂಡವನು ಕೆಳಗಿಳಿದು
ಮಂಡಲಕೆ ಬಿತ್ತಿದರೆ.
|| ಮಂಡಿಗೆಯ ಭೂಮ ಮಹಿಗೆ ||

ಪಾಳೆಯಗಳಲ್ಲಲ್ಲಿ ಅಲೆಯಿಟ್ಟ ನಾಡಲ್ಲಿ
ಏಳಿಗೆಯ ಕಂಪಿಲ್ಲ ಬೆಳವಿಗೆಯ ಸೊಂಪಿಲ್ಲ
ತಿಳಿವಿನಾ ಶಾಂತಿಯಲಿ
ಕೊಳೆಯುವುದು ದಿವ್ಯಛವಿ
|| ಇಳೆಯೆಲ್ಲ ಮೇಳೈಸಲು ||

ಏಳಿರೇಳೇಳಿರಿ ಬೇಲೂರ ಪುತ್ಥಳಿಯ
ಪೌಳಿಯನು ಹಂಪೆಯಲಿ, ತೊಳೆದಿಟ್ಟು ಎಲ್ಲೋರ
ತಿದ್ದಿಟ್ಟು ತಿಳಿರಂಗ
ಹೊತ್ತಿಟ್ಟು ಗೋದೆಯಲಿ
|| ಸುತ್ತಿಸುವ ತೆಪ್ಪೋತ್ಸವ ||

ಕೊಂಕಣರ ಶ್ರೀಧಾಟಿ ಪಡುವಣರ ಪದ ಸರಣಿ
ತೆಂಕಣರ ನಯನೀತಿ ನಡುವಣರ ಜೀವಕಳೆ
ಬೆಳೆಯಲಿದು ಕರುನಾಡು
ಬೆಳೆಸಿಡುವ ಗುಟ್ಟಿದುವೆ
|| ತಿಳಿದವರು ಕಂಡತೆರನು ||

ಬಹುದಿನದ ಕಾಂತಿಯಿದೆ ಶ್ರೀ ಕೃಷ್ಣ ರೂಪದಲಿ
ವಹಿಸಿರಿದ ಹೃದಯದಲಿ ಬೆಳೆವಹಿಯ ಸಜ್ಜೆಯಲಿ
ಬಾಳುವಿರಿ ಬಲು ದಿನದ
ಏಳಿಗೆಯ ಸೊಡರುರಿದು
|| ಕೇಳಿರಿದು ಬೆಳೆವ ಗುಟ್ಟು ||

ಮುಂದಿನಾ ಮಧು ಯುಗವು ಮೊಗ್ಗಿನೊಳಗಡಗಿಹುದು
ಮುಂದದನು ಆಳುವರು ನಿಮ್ಮೊಳಗೆ ಜನಿಸುವರು
ಬೊಮ್ಮ ವರ್ತನೆಯಲ್ಲಿ
ಮುಮ್ಮೊದಲು ಬೆಳೆದಿಹರು
|| ನಿಮ್ಮವರು ಹಿರಿಯರೆಲ್ಲ ||

ಒಂದಾಗಿರೊಂದಾಗಿ ಕಂಕಣದ ಬಂಧದಲಿ
ಒಂದಾಗಿ ಮುಂದಿರುತ ವಿಶ್ವಕರ್ಣಾಟಕ
ವಿಶ್ವಾಸದಾರತಿಯ
ವಿಶ್ವಕೆನಲೆತ್ತಲಿದು
||ಶ್ರೀ ವಿಶ್ವಕರ್ಣಾಟಕ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಣ್ಣಗೆಡುತ್ತಿವೆ ಬೀಜಗಳು
Next post ಧ್ಯಾನ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys