ಕಂಕಣ

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ
ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ
ಪಡುವಲಿನ ಹೊಡೆತದಲಿ
ವಡಲೊಡೆದು ಬೇರೆನಿಸಿ
|| ಸಡಲಿರಲು ಪ್ರೇಮಬಂಧ ||

ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ
ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು
ಮೃಡನಲ್ಲಿ ಬೇಡಿದೆನು
ಬಿಡುಯೆಂದು ಹಣೆಗಣ್ಣ
|| ಸುಡುಯೆಂದು ಸತ್ಯ ಕುರುಹ ||

ತಾಳಿದಾವೇಶಗಳು ಬಾಳದೆಯೆ ಅಳಿದಿಹುವು
ಬೀಳದಲೆ ತರ್ಪಣದ ಜಲ ಮೊಳೆಯುವುವೆ ಬೀಜ!
ಮೂಜಗದ ಭಂಡಾರ
ಸೋಜಿಗದ ಕರುನಾಡು
|| ಈ ಜಗದ ಚಿತ್ರ ಭಿತ್ತಿ ||

ಚಾಳೀಸೆ ಕಂಗಳಲಿ ಕಾಣಿಸವೆ ! ಕರುಹುಗಳು
ಸಾಲದೀವಿಗೆಯಿಟ್ಟು ತೋರಣವ ಸಿಂಗರಿಸಿ
ಸೋಗೆಗಂಗಳ ಭಾಗ್ಯ
ಬಾಗಿ ಬಳುಕುತ ಬಹಳು
|| ಈಗಲಿದೊ ಹರಕೆ ಫಲಿಸಿ ||

ಎಣಿಸುತಿದೆ ಹೆಜ್ಜೆಗಳ ಮಹಿಷರ ಶಿರವನ್ನು
ಚಿಣಿಚಿಣನೆ ಚಿಗಿದೋಡೆ ಧಾರ್ವಾಡ ಹೃದಯವದು
ಉರ್ವಿಯನು ಮೆಟ್ಟುವೆನು
ಓರ್ವನೆನೆ ದಕ್ಖಿಣನು
|| ಮರ್ಮದಲಿನಾಡು ಕರೆಯೆ ||

ಸೆಣಸಲೆನೆ ಭಾರತಿಗೆ ಕರ್ಣಾಟ ಖಡ್ಗವಿದೆ
ಹಣೆಗಿಡಲು ತಿಲಕಕ್ಕೆ ಕರುನಾಡ ಕತ್ತುರಿಯು
ತನ್ನಿರವ ನೋಡಲಿಕೆ ಕನ್ನಡದ ಕನ್ನ ಡಿಯು
|| ಇನ್ನುಂಟೆ ತಾಯ್ಗೆ ಕೊರತೆ ||

ಶರಧಿಗಳ ಸಂತವಿಸಿ ಹರಿದ ಕಾವ್ಯಗಳೆಲ್ಲಿ
ಚಿರದಿನಕೆ ಬೆಳಕೀವ ಲಾವಣ್ಯ ರೂಹೆಲ್ಲಿ
ಯಾವಲ್ಲಿ ಅಡಗಿಹವು
ಯಾವಗಿರಿ ಗುಹೆಯಲ್ಲಿ
|| ಭಾವನೆಗೆ ನಿಲುಕದಂತೆ ||

ಕರುನಾಡ ನಡುವಲಿದೆ, ಹೇಮಗಿರಿ ಅಡರದನು
ಹಿರಿಯರೆಮಗಿಟ್ಟಿರುವ ಭಂಡಾರ ನಿಲುಕುವುದು
ಕಂಡವನು ಕೆಳಗಿಳಿದು
ಮಂಡಲಕೆ ಬಿತ್ತಿದರೆ.
|| ಮಂಡಿಗೆಯ ಭೂಮ ಮಹಿಗೆ ||

ಪಾಳೆಯಗಳಲ್ಲಲ್ಲಿ ಅಲೆಯಿಟ್ಟ ನಾಡಲ್ಲಿ
ಏಳಿಗೆಯ ಕಂಪಿಲ್ಲ ಬೆಳವಿಗೆಯ ಸೊಂಪಿಲ್ಲ
ತಿಳಿವಿನಾ ಶಾಂತಿಯಲಿ
ಕೊಳೆಯುವುದು ದಿವ್ಯಛವಿ
|| ಇಳೆಯೆಲ್ಲ ಮೇಳೈಸಲು ||

ಏಳಿರೇಳೇಳಿರಿ ಬೇಲೂರ ಪುತ್ಥಳಿಯ
ಪೌಳಿಯನು ಹಂಪೆಯಲಿ, ತೊಳೆದಿಟ್ಟು ಎಲ್ಲೋರ
ತಿದ್ದಿಟ್ಟು ತಿಳಿರಂಗ
ಹೊತ್ತಿಟ್ಟು ಗೋದೆಯಲಿ
|| ಸುತ್ತಿಸುವ ತೆಪ್ಪೋತ್ಸವ ||

ಕೊಂಕಣರ ಶ್ರೀಧಾಟಿ ಪಡುವಣರ ಪದ ಸರಣಿ
ತೆಂಕಣರ ನಯನೀತಿ ನಡುವಣರ ಜೀವಕಳೆ
ಬೆಳೆಯಲಿದು ಕರುನಾಡು
ಬೆಳೆಸಿಡುವ ಗುಟ್ಟಿದುವೆ
|| ತಿಳಿದವರು ಕಂಡತೆರನು ||

ಬಹುದಿನದ ಕಾಂತಿಯಿದೆ ಶ್ರೀ ಕೃಷ್ಣ ರೂಪದಲಿ
ವಹಿಸಿರಿದ ಹೃದಯದಲಿ ಬೆಳೆವಹಿಯ ಸಜ್ಜೆಯಲಿ
ಬಾಳುವಿರಿ ಬಲು ದಿನದ
ಏಳಿಗೆಯ ಸೊಡರುರಿದು
|| ಕೇಳಿರಿದು ಬೆಳೆವ ಗುಟ್ಟು ||

ಮುಂದಿನಾ ಮಧು ಯುಗವು ಮೊಗ್ಗಿನೊಳಗಡಗಿಹುದು
ಮುಂದದನು ಆಳುವರು ನಿಮ್ಮೊಳಗೆ ಜನಿಸುವರು
ಬೊಮ್ಮ ವರ್ತನೆಯಲ್ಲಿ
ಮುಮ್ಮೊದಲು ಬೆಳೆದಿಹರು
|| ನಿಮ್ಮವರು ಹಿರಿಯರೆಲ್ಲ ||

ಒಂದಾಗಿರೊಂದಾಗಿ ಕಂಕಣದ ಬಂಧದಲಿ
ಒಂದಾಗಿ ಮುಂದಿರುತ ವಿಶ್ವಕರ್ಣಾಟಕ
ವಿಶ್ವಾಸದಾರತಿಯ
ವಿಶ್ವಕೆನಲೆತ್ತಲಿದು
||ಶ್ರೀ ವಿಶ್ವಕರ್ಣಾಟಕ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಣ್ಣಗೆಡುತ್ತಿವೆ ಬೀಜಗಳು
Next post ಧ್ಯಾನ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys