Home / ಕವನ / ಕವಿತೆ / ಕಿಡಿ

ಕಿಡಿ

ಕಿಡಿಯೊಂದನಡಗಿಸೆ ನುಡಿಬಲೆ ಹೂಡಿ
ಗುಡುಗಾಡಿ ಜಗವೆಲ್ಲ ಸುತ್ತಿತು ಹಾಡು
ಸಿಡಿಯುತ ನುಡಿಗಳು ಸುಳಿರಾಗವುಗುಳೆ
ಒಡಲುರಿಯೆಂದಿತು ಧರಣಿಯು ಹೊರಳಿ
ಚಿಗಿಯಿತಿದಾಶೆಯ ಕಿಚ್ಚಿದು ಕಿಚ್ಚು
ಚಿಗಿಯಿತು ಕವಿಮನದಾಶೆಯ ಕಿಚ್ಚು

ಇನ್ನೊಂದು ಕಿಡಿಯಿಟ್ಟೆ ರೇಖೆ ಬಣ್ಣದಲಿ
ಮುನ್ನದ ಮೋಹಿಸಿ ಮಹಿಯು ಮೈ ಮರೆಯೆ
ವನ್ಹಿ ರೂಪೋತ್ಕರ ಜ್ವಾಲೆಯು ಹರಿಯೆ
ಎನ್ನೊಡಲಾಶೆಯು ದಹಿಸಿತು ಧರೆಯ
ಚಿಗಿಯಿತಿದಾಶೆಯ ಕಿಚ್ಚಿದು ಕಿಚ್ಚು!
ಸೊಗಸಿತು ಕಿಚ್ಚಿದು! ಕಿಡಿಗಳು ಹೆಚ್ಚು!

ಮತ್ತೊಂದ ಸೆರೆಯಿಟ್ಟೆ ಕರಿಗಲ್ಲಿನಲ್ಲಿ
ಒತ್ತುವ ತೇಜ ತಥಾಗತ ಮೂರ್ತಿ!
ಮುತ್ತುತ ಜನ ಬಂದು ಮಣಿದರು! ಅಲ್ಲಿ
ಹತ್ತೊಂದು ಹೃದಯವನಾಳಿತು ಮೂರ್ತಿ!
ಚಿಗಿ, ಚಿಗಿ, ಚಿಗಿಯಿತು ಕವಿಮನದಾಶೆ!
ಚಿಗಿಯುತ ಸುಳಿಯಿತು ಧರಣಿಯ ಸೋಸಿ

ಅಂಡ ಪಿಂಡಾಂಡವನೆನ್ನೊಳು ಕಂಡೆ
ಕಂಡೆನು ತಾಂಡವ ಲಾಸ್ಯವ ಕಂಡೆ!
ನಿಂದೆನು ಕಾಲಪ್ರವಾಹವ ದಾಂಟಿ
ಇಂದು ನಾನಾಗಿಹೆ ಭುವನಕೆ ನೆಂಟ
ಚಿಗಿಯಿತು ಕವಿಮನದಾಶೆಯ ಗುಟ್ಟು
ಸೊಗಸುವ ಕಾಂತಿಯ ಧರಣಿಗೆ ಕೊಟ್ಟು!
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...