Home / ಕವನ / ಕವಿತೆ / ಹೊಳಲು

ಹೊಳಲು

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ
ಅಂದಣವದೆತ್ತಿರಲು ಅಂದವೆನೆ ಪರರೆಲ್ಲ
ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ
ಭಾರತದಿ ಬಂತು ಹೊಳಲು

ಚಂದಿರನು ತಂಬೆಳಕ ನಗುವಿಡಲು ಅಪಹಾಸ
ದಂದಣವನೆತ್ತಿರಲು ಲಗುಬಿಗಿಯ ಪರರಾಳು
ಮಂದಿಗಳು ತಿಳಿದೇಳಲಗೊ! ಯೋಗಿ ಕರೆಯುತಿರೆ
ಬಾರೆನುತ ಬಂತು ಹೊಳಲು

ಕೀಳಕೀಳಲಿ ಪುಟ್ಟಿ ಮೇಲೆ ಮೇಲೇರುತಲಿ
ಆಳುತಲಿ ಜನಮನವ ಶೂಲಕೊಡ್ಡುತ ಸುರಿಸಿ
ಬಾಳ ಜೀವನ ಜಲವನಾಲಿಯರಿಯದಲಳಿಯೆ
ಜನರಿಳಿದು ಬಂದ ಹೊಳಲು

ಕಾಳು ಕಡ್ಡಿಯ ತೂರಿ ಮೇಲೆ ಮೇಲರಿಸುತ
ನಾಳಿನಾ ನವಯುಗಕೆ ಮೇಲೆನಿಪ ಬೀಜಗಳ
ಹೂಳುವರು ಬರಲಾಗಿ ಕಾಲ ಬಂದಿದೆಯೆನುತ
ಜನಜನದ ನುಡಿಯ ಹೊಳಲು

ಇದು ವಹ್ನಿಗಿರಿ ಇದುವೆ ಮಳೆವಹ್ನಿ ಹೊಳೆವಹ್ನಿ!
ಇದುವುಕ್ಕಿ ಧರೆಯೆಲ್ಲ ತಳಮಳಿಸಿ ನಡುಗುತಿದೆ
ಅದೊ! ಸೊಕ್ಕಿದಾಭಾವ! ತಳಹದಿಯು ಕುಸಿಬಿತ್ತು!
ಮರಳುತಿಹ ಯುಗದ ಹೊಳಲು

ಇದು ಸಿಡಿಲು ಕಾರ್ಮೋಡ ಪ್ರಳಯ ಜಲಧಾರೆಯಿವು
ಇದು ಝರಿಯ ಜಲಧಾರೆ ಇಳೆಗಿಳಿವ ದೇವನದಿ!
ಅದೋ! ವಹ್ನಿ ಕಬ್ಬೊಗೆಯು ಅಳಿದನಿವು ಸಿಡಿದವವು
ಚರಕದರೆ ತಿರುಗೆ! ಹೊಳಲು

ವಿಷಘಳಿಗೆ ಪರಜನಕೆ ಮಧುಯೋಗ ಭಾರತಕೆ
ಹಸಿದು ಶಂಕರಿ ನಿಲ್ಲಲದು ಪ್ರಲಯ ಪರಜನಕೆ
ಬಸಿಯಲೆಂಧಕ ರುಧಿರವದುನೆಲಕೆ ಶ್ರೀ ಶಾಂತಿ
ಎನುತೆನುವ ನರರ ಹೊಳಲು

ಹಸುಳೆಯಂದದಿ ನಕ್ಕು ಮಧುರ ಭಾವವ ಬೀರಿ
ಹೊಸತೆರನ ಜಿಹ್ವೆಯಲಿ ಸುಧೆಯ ಜಾಹ್ನವಿಯುದಿಸೆ
ಹೊಸಯುಗದ ಗಂಧವಹನಿದೊ ಗಾಂಧಿ ಏಳುತಿಹ
ಎನುತೆನುವ ನಾಡ! ಹೊಳಲು

ಅಲ್ಲೋಲ ಕಲ್ಲೋಲ ಉದಧಿಗಳು ಎಚ್ಚೆತ್ತು!
ಎಲ್ಲೆಲ್ಲು ಸಲ್ಲಾಪ ಕುದಿವ ಮನದಾಶಯದ
ಹೊಲ್ಲೆ ಹದ ಸುಳಿವಿರದ! ಮಧುಯುಗವು ಮರಳುತಿರೆ
ಉಲ್ಲಾಸದೊರೆಯ ಹೊಳಲು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್