ಹೊಳಲು

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ
ಅಂದಣವದೆತ್ತಿರಲು ಅಂದವೆನೆ ಪರರೆಲ್ಲ
ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ
ಭಾರತದಿ ಬಂತು ಹೊಳಲು

ಚಂದಿರನು ತಂಬೆಳಕ ನಗುವಿಡಲು ಅಪಹಾಸ
ದಂದಣವನೆತ್ತಿರಲು ಲಗುಬಿಗಿಯ ಪರರಾಳು
ಮಂದಿಗಳು ತಿಳಿದೇಳಲಗೊ! ಯೋಗಿ ಕರೆಯುತಿರೆ
ಬಾರೆನುತ ಬಂತು ಹೊಳಲು

ಕೀಳಕೀಳಲಿ ಪುಟ್ಟಿ ಮೇಲೆ ಮೇಲೇರುತಲಿ
ಆಳುತಲಿ ಜನಮನವ ಶೂಲಕೊಡ್ಡುತ ಸುರಿಸಿ
ಬಾಳ ಜೀವನ ಜಲವನಾಲಿಯರಿಯದಲಳಿಯೆ
ಜನರಿಳಿದು ಬಂದ ಹೊಳಲು

ಕಾಳು ಕಡ್ಡಿಯ ತೂರಿ ಮೇಲೆ ಮೇಲರಿಸುತ
ನಾಳಿನಾ ನವಯುಗಕೆ ಮೇಲೆನಿಪ ಬೀಜಗಳ
ಹೂಳುವರು ಬರಲಾಗಿ ಕಾಲ ಬಂದಿದೆಯೆನುತ
ಜನಜನದ ನುಡಿಯ ಹೊಳಲು

ಇದು ವಹ್ನಿಗಿರಿ ಇದುವೆ ಮಳೆವಹ್ನಿ ಹೊಳೆವಹ್ನಿ!
ಇದುವುಕ್ಕಿ ಧರೆಯೆಲ್ಲ ತಳಮಳಿಸಿ ನಡುಗುತಿದೆ
ಅದೊ! ಸೊಕ್ಕಿದಾಭಾವ! ತಳಹದಿಯು ಕುಸಿಬಿತ್ತು!
ಮರಳುತಿಹ ಯುಗದ ಹೊಳಲು

ಇದು ಸಿಡಿಲು ಕಾರ್ಮೋಡ ಪ್ರಳಯ ಜಲಧಾರೆಯಿವು
ಇದು ಝರಿಯ ಜಲಧಾರೆ ಇಳೆಗಿಳಿವ ದೇವನದಿ!
ಅದೋ! ವಹ್ನಿ ಕಬ್ಬೊಗೆಯು ಅಳಿದನಿವು ಸಿಡಿದವವು
ಚರಕದರೆ ತಿರುಗೆ! ಹೊಳಲು

ವಿಷಘಳಿಗೆ ಪರಜನಕೆ ಮಧುಯೋಗ ಭಾರತಕೆ
ಹಸಿದು ಶಂಕರಿ ನಿಲ್ಲಲದು ಪ್ರಲಯ ಪರಜನಕೆ
ಬಸಿಯಲೆಂಧಕ ರುಧಿರವದುನೆಲಕೆ ಶ್ರೀ ಶಾಂತಿ
ಎನುತೆನುವ ನರರ ಹೊಳಲು

ಹಸುಳೆಯಂದದಿ ನಕ್ಕು ಮಧುರ ಭಾವವ ಬೀರಿ
ಹೊಸತೆರನ ಜಿಹ್ವೆಯಲಿ ಸುಧೆಯ ಜಾಹ್ನವಿಯುದಿಸೆ
ಹೊಸಯುಗದ ಗಂಧವಹನಿದೊ ಗಾಂಧಿ ಏಳುತಿಹ
ಎನುತೆನುವ ನಾಡ! ಹೊಳಲು

ಅಲ್ಲೋಲ ಕಲ್ಲೋಲ ಉದಧಿಗಳು ಎಚ್ಚೆತ್ತು!
ಎಲ್ಲೆಲ್ಲು ಸಲ್ಲಾಪ ಕುದಿವ ಮನದಾಶಯದ
ಹೊಲ್ಲೆ ಹದ ಸುಳಿವಿರದ! ಮಧುಯುಗವು ಮರಳುತಿರೆ
ಉಲ್ಲಾಸದೊರೆಯ ಹೊಳಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಷೋಡಷಿ
Next post ವಿಮರ್ಶೆ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys