Home / ಕವನ / ಕವಿತೆ / ಹೊಳಲು

ಹೊಳಲು

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ
ಅಂದಣವದೆತ್ತಿರಲು ಅಂದವೆನೆ ಪರರೆಲ್ಲ
ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ
ಭಾರತದಿ ಬಂತು ಹೊಳಲು

ಚಂದಿರನು ತಂಬೆಳಕ ನಗುವಿಡಲು ಅಪಹಾಸ
ದಂದಣವನೆತ್ತಿರಲು ಲಗುಬಿಗಿಯ ಪರರಾಳು
ಮಂದಿಗಳು ತಿಳಿದೇಳಲಗೊ! ಯೋಗಿ ಕರೆಯುತಿರೆ
ಬಾರೆನುತ ಬಂತು ಹೊಳಲು

ಕೀಳಕೀಳಲಿ ಪುಟ್ಟಿ ಮೇಲೆ ಮೇಲೇರುತಲಿ
ಆಳುತಲಿ ಜನಮನವ ಶೂಲಕೊಡ್ಡುತ ಸುರಿಸಿ
ಬಾಳ ಜೀವನ ಜಲವನಾಲಿಯರಿಯದಲಳಿಯೆ
ಜನರಿಳಿದು ಬಂದ ಹೊಳಲು

ಕಾಳು ಕಡ್ಡಿಯ ತೂರಿ ಮೇಲೆ ಮೇಲರಿಸುತ
ನಾಳಿನಾ ನವಯುಗಕೆ ಮೇಲೆನಿಪ ಬೀಜಗಳ
ಹೂಳುವರು ಬರಲಾಗಿ ಕಾಲ ಬಂದಿದೆಯೆನುತ
ಜನಜನದ ನುಡಿಯ ಹೊಳಲು

ಇದು ವಹ್ನಿಗಿರಿ ಇದುವೆ ಮಳೆವಹ್ನಿ ಹೊಳೆವಹ್ನಿ!
ಇದುವುಕ್ಕಿ ಧರೆಯೆಲ್ಲ ತಳಮಳಿಸಿ ನಡುಗುತಿದೆ
ಅದೊ! ಸೊಕ್ಕಿದಾಭಾವ! ತಳಹದಿಯು ಕುಸಿಬಿತ್ತು!
ಮರಳುತಿಹ ಯುಗದ ಹೊಳಲು

ಇದು ಸಿಡಿಲು ಕಾರ್ಮೋಡ ಪ್ರಳಯ ಜಲಧಾರೆಯಿವು
ಇದು ಝರಿಯ ಜಲಧಾರೆ ಇಳೆಗಿಳಿವ ದೇವನದಿ!
ಅದೋ! ವಹ್ನಿ ಕಬ್ಬೊಗೆಯು ಅಳಿದನಿವು ಸಿಡಿದವವು
ಚರಕದರೆ ತಿರುಗೆ! ಹೊಳಲು

ವಿಷಘಳಿಗೆ ಪರಜನಕೆ ಮಧುಯೋಗ ಭಾರತಕೆ
ಹಸಿದು ಶಂಕರಿ ನಿಲ್ಲಲದು ಪ್ರಲಯ ಪರಜನಕೆ
ಬಸಿಯಲೆಂಧಕ ರುಧಿರವದುನೆಲಕೆ ಶ್ರೀ ಶಾಂತಿ
ಎನುತೆನುವ ನರರ ಹೊಳಲು

ಹಸುಳೆಯಂದದಿ ನಕ್ಕು ಮಧುರ ಭಾವವ ಬೀರಿ
ಹೊಸತೆರನ ಜಿಹ್ವೆಯಲಿ ಸುಧೆಯ ಜಾಹ್ನವಿಯುದಿಸೆ
ಹೊಸಯುಗದ ಗಂಧವಹನಿದೊ ಗಾಂಧಿ ಏಳುತಿಹ
ಎನುತೆನುವ ನಾಡ! ಹೊಳಲು

ಅಲ್ಲೋಲ ಕಲ್ಲೋಲ ಉದಧಿಗಳು ಎಚ್ಚೆತ್ತು!
ಎಲ್ಲೆಲ್ಲು ಸಲ್ಲಾಪ ಕುದಿವ ಮನದಾಶಯದ
ಹೊಲ್ಲೆ ಹದ ಸುಳಿವಿರದ! ಮಧುಯುಗವು ಮರಳುತಿರೆ
ಉಲ್ಲಾಸದೊರೆಯ ಹೊಳಲು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...