Home / ಕವನ / ಕವಿತೆ / ಶಿಲ್ಪಿ

ಶಿಲ್ಪಿ

ಕೆಂಪು ವಜ್ರ ನೀಲ ಪುಷ್ಯ
ರಾಗ ವೈಡೂರ್ಯವು
ಚಂಪರಾಗ ಚಂದ್ರಕಾಂತ
ನಾಗ ಗೋಮೇಧಿಕ

ಇಂತು ನೋಡಿ ಒಡೆದು ಕಡೆದು
ತಿಕ್ಕಿ ನಾಸಿಕ್ಕಿದೆ
ಚಿಂತೆಯಲ್ಲಿ ಸಾಣೆಯಿಟ್ಟು
ಮಿಕ್ಕುವನ್ನಿಕ್ಕಿದೆ

ಇಡಲು ಕಳಸ ಗೋಪುರಾದಿ
ರತುನ ಮಂದಿರಕೆನೆ
ನುಡಿಯ ಗಣಿಗಳಿಂದ ತೆಗೆದೆ
ರತುನ ಗಲ್ಲೆಂಬಿವ

ಹೂಡಿ ನೋಡಿ ತೋರಣಾದಿ
ಅಕ್ಷರಾಲಯಕನೆ
ಜೋಡಿಸಿಹೆನು ರೂಢಿಯೊಳಗೆ
ಅಕ್ಷರಾಲಯವಿದ

ಕಣ್ಣಿವೆಂದು ಉಣ್ಣದಂಥ
ರೂಪ ಸೌಂದಯ್ಯವು!
ಅಣ್ಣ ಕೇಳು ಚಲ್ವರೂಹ
ರೂಪ ರಾಗಾದಿಯು

ದ್ವಾರ ತೋರಣಾದಿಯಿಲ್ಲಿ
ಬಿಜಯಿಸೈ! ಅತಿಧಿಯೆ!
ದ್ವಾರ ದರ್ಪಣಾದಿಯಲ್ಲಿ
ಬಿಜಯಿಸೈ ಪಧಿಕನೆ

ಸಾಗಿ ಮುಂದೆ ನೀಡು‌ಅಲ್ಲಿ
ಅತ್ತಲಲ್ಲಿ ಕರಗಳ!
ರಾಗಿಣಿಯರು ಬಂದರಲ್ಲಿ
ಮತ್ತಕಾಶಿನಿಯರು!

ಇಲ್ಲಿ ಸಾಲಗೊಂಬೆ ನೋಡು
ನೋಡು ಕೈಸಾಲೆಯ!
ಇಲ್ಲಿ ಏರುಗಲ್ಲ ರಾಜಿ
ನೋಡು ವೈಭೋಗವ!

ಭೋಗ ಸಾಧ್ಯ ಸ್ವಪ್ನ ಸುಧೆಯ
ದೆಂದೆಯಾ ಈ ದಿನ
ಯೋಗ ಸಾಧ್ಯವೆಂಬ ರೂಪಿ
ವೆಂದೆಯಾ! ಈ ದಿನ!

ಏಳುನೆಲೆಯ ಶಿರಿಯನಲ್ಲಿ
ಶೀಲನೀ ಕಂಡೆಯ
ಭಾಳವುಂಡು ದಣಿದೆನೆಂದು
ಲೋಲನೀನೆಂದೆಯ!

ಇಷ್ಟು ರೂಪು ನೋಡಿ ದಿಟ್ಟಿ
ನೊಂದುದೇ ನೆಂಬೆಯ
ಇಷ್ಟ ದೈವ! ಕಾಣಲಿಲ್ಲ!
ವೆಂದಿತೇ ಹೃದಯವು!

ಕಾಣಲಿಲ್ಲ ಕಾಂತೆಯನ್ನು
ಕಾಂತೆಯೆಲ್ಲೆಂದಿತೆ?
ಜಾಣ ತಿರುಗು ವಳಗೆ ನೋಡು
ಕ್ಲಾಂತ! ನೀ ಮುಂಗಡೆ.

ಬಿಗಿದು ಆಶೆ ಬಿಗಿದು ಊಹೆ
ಮುಗುದ! ಮೆಲ್ಲನಡಿಯಿಡು
ಮುಗಿಲಿನಂತೆ ತೆರೆಯ ಕಡೆಗೆ
ಮುಗುದ! ಮೆಲ್ಲನಡಿಯಿಡು.

ಏಳು ಹೊಸಿಲ ದಾಟ ಬೇಕು
ಏಳು ತರೆಯ ಹಾರಿಸಿ
ಏಳು ವರಣ ಜೋತಿ ರಾಜಿ
ಏಳ ನೀ ದಾಟುವೆ.

ತೆರೆಯ ಶೆಳೆದು ನೋಡು ವಳಗೆ
ಇರುವ ಮೂರ್ತಿ ಯಾವುದು?
ಶಿರಿನಿಕೇತನಕ್ಕೆ ಈಕೆ
ಅರಿಯೆ ನೀ ರಾಣಿಯು!

ಬಲ್ಲೆ ಬಲೆ! ನೀನು ಇವಳ
ಬಲ್ಲೆಯೈಯ್ಯ! ಅತಿಥಿಯೆ!
ಚಲ್ಪ ರೂಹ ತೇಜದಲ್ಲಿ
ಎಲ್ಲೋ ನೀ ಮಿಂದಿಹೆ.

ಇದುವೆ ಪದುಮವನ್ನು ಹುಡಕಿ
ಭ್ರಮರ ಕೋರಿಕೆಗಳು
ಚದುರ! ತಿರುಗಿ ಯೇಳು ಲೋಕ
ಅಮಮ! ಹಿಂದಿರುಗಿವೆ.

ಹೃದಯ ರಮೆಯನದಯಳೆಂದು
ವಿರಹಿ ನೀ ನೊಂದೆಯ?
ಚದುರೆಯನ್ನು ವಿರಹ ಮನವು
ಅರಸಿ ಕಾಣದಿದ್ದಿತೇ?

ನೀನು ಕಂಡು ಭ್ರಮಿಸಿ ಪೋದ
ನಾಳೆಯೆಂಬಾದಿನ
ರಾಣಿ! ನಿನ್ನ ಧ್ಯಾನದಲ್ಲಿ
ಭಾಳ ಮೈಮರೆತಿರೆ

ಚಂಡಬಲರು ದೈತ್ಯ ಸುತರು
ದೂರ ನೀರವರಿರೆ!
ಕಂಡು ಶೆಳೆದು ವೊಯ್ದರವಳ
ನೀರು ಯೇಳ ರಾಚೆಗೆ!

ರಸಿಕ ! ನಿನ್ನ ನೆನಹಿನಲ್ಲಿ
ಕನಲುತಿರ್ದೀಕೆಯ
ಸಸಿಯ ಮೊಗವ ಕಂಡೆನೊಮ್ಮ
ಕನಸ ಸಂಚರಿಯಲಿ.

ಕಮಲ ನಾಳ ದೊಳಗೆ ಯಿಳಿದು
ಕಂಡೆ ನಾ ಶರೆಮನೆ.
ರಮಣಿ ಇವಳ ಬಿಡಿಸಿ ತಂದೆ
ಪುಂಡರಂ ಖಂಡ್ರಿಸಿ.

ನುಡಿಯ ಲಲಿತ ಗೃಹವ ಕಟ್ಟಿ
ಕುವರಿಯನ್ನಿಟ್ಟೆನು,
ಒಡನೆ ಛಲವ ಹಿಡಿದವಳವಳು
ಅವನ ತೋರೆನುತಲಿ!

ರತುನ ದ್ವಾರ ಮುಚ್ಚದಿಹುದು
ಸತತ ರಾಗಿಣಿಯರು
ಪಧಿಕ! ರಸಿಕ! ಬರುವನೆಂದು
ಸತತ ಕಾದಿರುವರು!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...