Home / ಕವನ / ಕವಿತೆ / ಶಿಲ್ಪಿ

ಶಿಲ್ಪಿ

ಕೆಂಪು ವಜ್ರ ನೀಲ ಪುಷ್ಯ
ರಾಗ ವೈಡೂರ್ಯವು
ಚಂಪರಾಗ ಚಂದ್ರಕಾಂತ
ನಾಗ ಗೋಮೇಧಿಕ

ಇಂತು ನೋಡಿ ಒಡೆದು ಕಡೆದು
ತಿಕ್ಕಿ ನಾಸಿಕ್ಕಿದೆ
ಚಿಂತೆಯಲ್ಲಿ ಸಾಣೆಯಿಟ್ಟು
ಮಿಕ್ಕುವನ್ನಿಕ್ಕಿದೆ

ಇಡಲು ಕಳಸ ಗೋಪುರಾದಿ
ರತುನ ಮಂದಿರಕೆನೆ
ನುಡಿಯ ಗಣಿಗಳಿಂದ ತೆಗೆದೆ
ರತುನ ಗಲ್ಲೆಂಬಿವ

ಹೂಡಿ ನೋಡಿ ತೋರಣಾದಿ
ಅಕ್ಷರಾಲಯಕನೆ
ಜೋಡಿಸಿಹೆನು ರೂಢಿಯೊಳಗೆ
ಅಕ್ಷರಾಲಯವಿದ

ಕಣ್ಣಿವೆಂದು ಉಣ್ಣದಂಥ
ರೂಪ ಸೌಂದಯ್ಯವು!
ಅಣ್ಣ ಕೇಳು ಚಲ್ವರೂಹ
ರೂಪ ರಾಗಾದಿಯು

ದ್ವಾರ ತೋರಣಾದಿಯಿಲ್ಲಿ
ಬಿಜಯಿಸೈ! ಅತಿಧಿಯೆ!
ದ್ವಾರ ದರ್ಪಣಾದಿಯಲ್ಲಿ
ಬಿಜಯಿಸೈ ಪಧಿಕನೆ

ಸಾಗಿ ಮುಂದೆ ನೀಡು‌ಅಲ್ಲಿ
ಅತ್ತಲಲ್ಲಿ ಕರಗಳ!
ರಾಗಿಣಿಯರು ಬಂದರಲ್ಲಿ
ಮತ್ತಕಾಶಿನಿಯರು!

ಇಲ್ಲಿ ಸಾಲಗೊಂಬೆ ನೋಡು
ನೋಡು ಕೈಸಾಲೆಯ!
ಇಲ್ಲಿ ಏರುಗಲ್ಲ ರಾಜಿ
ನೋಡು ವೈಭೋಗವ!

ಭೋಗ ಸಾಧ್ಯ ಸ್ವಪ್ನ ಸುಧೆಯ
ದೆಂದೆಯಾ ಈ ದಿನ
ಯೋಗ ಸಾಧ್ಯವೆಂಬ ರೂಪಿ
ವೆಂದೆಯಾ! ಈ ದಿನ!

ಏಳುನೆಲೆಯ ಶಿರಿಯನಲ್ಲಿ
ಶೀಲನೀ ಕಂಡೆಯ
ಭಾಳವುಂಡು ದಣಿದೆನೆಂದು
ಲೋಲನೀನೆಂದೆಯ!

ಇಷ್ಟು ರೂಪು ನೋಡಿ ದಿಟ್ಟಿ
ನೊಂದುದೇ ನೆಂಬೆಯ
ಇಷ್ಟ ದೈವ! ಕಾಣಲಿಲ್ಲ!
ವೆಂದಿತೇ ಹೃದಯವು!

ಕಾಣಲಿಲ್ಲ ಕಾಂತೆಯನ್ನು
ಕಾಂತೆಯೆಲ್ಲೆಂದಿತೆ?
ಜಾಣ ತಿರುಗು ವಳಗೆ ನೋಡು
ಕ್ಲಾಂತ! ನೀ ಮುಂಗಡೆ.

ಬಿಗಿದು ಆಶೆ ಬಿಗಿದು ಊಹೆ
ಮುಗುದ! ಮೆಲ್ಲನಡಿಯಿಡು
ಮುಗಿಲಿನಂತೆ ತೆರೆಯ ಕಡೆಗೆ
ಮುಗುದ! ಮೆಲ್ಲನಡಿಯಿಡು.

ಏಳು ಹೊಸಿಲ ದಾಟ ಬೇಕು
ಏಳು ತರೆಯ ಹಾರಿಸಿ
ಏಳು ವರಣ ಜೋತಿ ರಾಜಿ
ಏಳ ನೀ ದಾಟುವೆ.

ತೆರೆಯ ಶೆಳೆದು ನೋಡು ವಳಗೆ
ಇರುವ ಮೂರ್ತಿ ಯಾವುದು?
ಶಿರಿನಿಕೇತನಕ್ಕೆ ಈಕೆ
ಅರಿಯೆ ನೀ ರಾಣಿಯು!

ಬಲ್ಲೆ ಬಲೆ! ನೀನು ಇವಳ
ಬಲ್ಲೆಯೈಯ್ಯ! ಅತಿಥಿಯೆ!
ಚಲ್ಪ ರೂಹ ತೇಜದಲ್ಲಿ
ಎಲ್ಲೋ ನೀ ಮಿಂದಿಹೆ.

ಇದುವೆ ಪದುಮವನ್ನು ಹುಡಕಿ
ಭ್ರಮರ ಕೋರಿಕೆಗಳು
ಚದುರ! ತಿರುಗಿ ಯೇಳು ಲೋಕ
ಅಮಮ! ಹಿಂದಿರುಗಿವೆ.

ಹೃದಯ ರಮೆಯನದಯಳೆಂದು
ವಿರಹಿ ನೀ ನೊಂದೆಯ?
ಚದುರೆಯನ್ನು ವಿರಹ ಮನವು
ಅರಸಿ ಕಾಣದಿದ್ದಿತೇ?

ನೀನು ಕಂಡು ಭ್ರಮಿಸಿ ಪೋದ
ನಾಳೆಯೆಂಬಾದಿನ
ರಾಣಿ! ನಿನ್ನ ಧ್ಯಾನದಲ್ಲಿ
ಭಾಳ ಮೈಮರೆತಿರೆ

ಚಂಡಬಲರು ದೈತ್ಯ ಸುತರು
ದೂರ ನೀರವರಿರೆ!
ಕಂಡು ಶೆಳೆದು ವೊಯ್ದರವಳ
ನೀರು ಯೇಳ ರಾಚೆಗೆ!

ರಸಿಕ ! ನಿನ್ನ ನೆನಹಿನಲ್ಲಿ
ಕನಲುತಿರ್ದೀಕೆಯ
ಸಸಿಯ ಮೊಗವ ಕಂಡೆನೊಮ್ಮ
ಕನಸ ಸಂಚರಿಯಲಿ.

ಕಮಲ ನಾಳ ದೊಳಗೆ ಯಿಳಿದು
ಕಂಡೆ ನಾ ಶರೆಮನೆ.
ರಮಣಿ ಇವಳ ಬಿಡಿಸಿ ತಂದೆ
ಪುಂಡರಂ ಖಂಡ್ರಿಸಿ.

ನುಡಿಯ ಲಲಿತ ಗೃಹವ ಕಟ್ಟಿ
ಕುವರಿಯನ್ನಿಟ್ಟೆನು,
ಒಡನೆ ಛಲವ ಹಿಡಿದವಳವಳು
ಅವನ ತೋರೆನುತಲಿ!

ರತುನ ದ್ವಾರ ಮುಚ್ಚದಿಹುದು
ಸತತ ರಾಗಿಣಿಯರು
ಪಧಿಕ! ರಸಿಕ! ಬರುವನೆಂದು
ಸತತ ಕಾದಿರುವರು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...