Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...