Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್