Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...