Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...