Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...