Home / ಲೇಖನ / ವಿಜ್ಞಾನ / ೫೦ ಸಾವಿರ ವರ್ಷದ ನಂತರ ಭೂಮಿಗಿಳಿಯುವಂತೆ ಮಾಡಿದ ಕೃತಕ ಉಪಗ್ರಹ : ಕಾಲಕೋಶ

೫೦ ಸಾವಿರ ವರ್ಷದ ನಂತರ ಭೂಮಿಗಿಳಿಯುವಂತೆ ಮಾಡಿದ ಕೃತಕ ಉಪಗ್ರಹ : ಕಾಲಕೋಶ

೧,೮೦೦ ಕಿ.ಮೀ. ಎತ್ತರದಲ್ಲಿ ಸರ್ವಾಂಗ ಸುಂದರವಾದ ಕಲಾಕೃತಿಯಂತೆ ಮನಸ್ಸನ್ನು ಸೆಳಯಬಲ್ಲ ಉಪಗ್ರಹವೊಂದರ ಸಿದ್ಧತೆಯಾಗುತ್ತಿದ್ದು ಇದನ್ನು ಹಾರಿ ಬಿಡಲು ಪ್ರೆಂಚ್ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ ಇದು ೫೦ ಸಾವಿರ ವರ್ಷಗಳ ನಂತರ ಭೂಮಿಗಿಳಿಯುವ ‘ಕಾಲಕೋಶ’ ಇದಾಗಿದೆ. ಮೇಲಕ್ಕೇರಿದಾಗ ಭೂಮಿಗೆ ಮುಖ ಮಾಡಿ ನಿಶ್ಚಲವಾಗಿ ನಿಲ್ಲುವ ಇದು ಪೂರ್ಣಾವಧಿಯ ನಂತರ ನಿಧಾರವಾಗಿ ಉರಿಯುತ್ತ ಉಜ್ವಲ ಬೆಳಕಿನಿಂದ ಕೋರೈಸುತ್ತ ಕೆಳಕ್ಕೆ ಬಿದ್ದೂ ಅದರೊಳಗೆ ಮಿನುಗುವ ‘ಟೈಟಾನಿಯಂ’ ಲೋಹದ ಗೋಲಾಕಾರದ ಕಾಲಕೋಶ ಗೋಚರಿಸುತ್ತದೆ. ಮುಂದೊಂದು ದಿನ ಈ ಭೂಮಿಯ ಮೇಲೆ ವಾಸಿಸುವ ಜನವು ಇದನ್ನು ಒಡೆದು ನೋಡವಂತಾಗುತ್ತದೆ.

ಇ- ಮೇಲ್ ಮೂಲಕ ಪತ್ರವನ್ನು ಕಾಂಪ್ಯಾಕ್ಟ್ ಡಿಸ್ಕಿನಲ್ಲಿ (C.D.) ಮುದ್ರಿಸಿ ಇದರೊಳಗೆ ಇಡಲಾಗುತ್ತದೆ. ಕಿಯೊ (KEO) ಹೆಸರಿನ ಈ ಉಪಗ್ರಹ ಕೇವಲ ಹತ್ತರೊಳಗೆ ಹನ್ನೊಂದನೆ -ನೌಕೆಯಾಗಿರದೇ ಸುಂದರಕಲಾ ಕೃತಿಯಾಗಿ ರೂಪುಗೊಳ್ಳುತ್ತದೆ. ಈ ಕಾಲಕೋಶವನ್ನು ಕಲ್ಪಿಸಿದ ಪ್ರಾನ್ಸ್‌ನ ಖಗೋಳ ವಿಜ್ಞಾನಿ ಜಿನ್‌ಮಾರ್ಕ್ ಫಿಲಪ್ ಸ್ವತಃ ಕಲಾವಿದ ಕಕ್ಷೆಯಲ್ಲಿ ವಜ್ರದ ಹಾಗೆ ಹೊಳೆಯುವ ಈ ಗೋಲಾಕಾರದ ಕಾಲಕೋಶಕ್ಕೆ ಉದ್ದನೆಯ ಎರಡು ರೆಕ್ಕೆಗಳಿರುತ್ತವೆ. ಕನ್ನಡಿ ಬಣ್ಣದ ಪಕ್ಷಿಯಂತೆ ಅದು ನಿಂತಲ್ಲೆ ತನ್ನ ರೆಕ್ಕೆಗಳನ್ನು ೫೦ ಸಾವಿರ ವರ್ಷಗಳವರೆಗೆ ಬಡಿಯುತ್ತ ಇರುತ್ತದೆ. ಮನುಷ್ಯನ ಈಗಿನ ತಾಂತ್ರಿಕ ಸಾಧನೆಗಳ ಪರಾಕಾಷ್ಟತೆಯನ್ನು ಜಗತ್ತಿಗೆ ಇದು ಬಿತ್ತರಿಸುತ್ತದೆ. ನಿಂತಲ್ಲೆ ಉಲ್ಕಾಕಣಗಳ ದಾಳಿಗೆ ತುತ್ತಾಗದಂತೆ ಟಂಗ್‌ಸ್ಟನ್ – ಅಲ್ಯೂಮಿನಿಯಂ ಮತ್ತು ಟೈಟಾನಿಯಂ ಅನೇಕ ಲೋಹದ ಪದರುಗಳನ್ನು ಹೊದಿಸಲಾಗುತ್ತದೆ. ದೇಹ ಮತ್ತು ಕಾಲಕೋಶ ಎರಡೂ ಸೇರಿ ೧೦೦ ಕಿಲೋ. ವಿರುವುದಿಲ್ಲ. ಬಾಹ್ಯಾಕಾಶದಲ್ಲಿ ಮನುಷ್ಯರೇ ಹಾರಿಬಿಟ್ಟ ಅನೇಕ ಲೋಹದ ತುಣುಕುಗಳಿವೆ. ಅವು ಈ ಕೋಶಕ್ಕೆ ಅಪ್ಪಳಿಸಿದ ಹಾಗೇ ನೋಡಿಕೊಳ್ಳುವುದೇ ದೊಡ್ಡ ಸಮಸ್ಯೆ. ಕಾಲಕೋಶಕ್ಕೆ ಕಲಾತ್ಮಕ ರೆಕ್ಕೆ ಮೂಡುವಲ್ಲಿಯೂ ತಾಂತ್ರಿಕ ನೈಪುಣ್ಯವಿದೆ. ‘ನಿಟನಾಲ್’ ಎಂಬ ಮಿಶ್ರ ಲೋಹಕ್ಕೆ ಒಂದು ವಿಶಿಷ್ಟ ನೆನಪಿನ ಶಕ್ತಿ‌ಇದೆ. ಭೂಮಿಯ ನೆರಳು ಬಿದ್ದಾಗ ಅದರ ರೆಕ್ಕೆ ತಾನಾಗಿಯೇ ಮಡಿಚಿಕೊಳ್ಳುತ್ತದೆ. ಬಿಸಿಲಿದ್ದಾಗ ಬಿಚ್ಚಿಕೊಳ್ಳುತ್ತದೆ. ಈ ನೆನಪಿನ ‘ನಿಟಿನಾಲ್’ ಮಿಶ್ರ ಲೋಹದಿಂದ ಈ ರೆಕ್ಕೆಯನ್ನು ತಯಾರಿಸಲಾಗಿದೆ.

ಟೈಟಾನಿಯಂ ಕೈಟ್ರೆಟ್ ರಸಾಯನ ಲೇಪನ ಪರಮಾಣು ತಜ್ಞರು ವೇಗವರ್ಧಕಗಳಲ್ಲಿ ಇಟ್ಟು ಪರೀಕ್ಷೆ ಮಾಡಿ ಸಿಡಿಯಲ್ಲಿನ ಮಾಹಿತಿಗಳನ್ನು ಇರಿಸಿದ್ದಾರೆ. ೫೦ ವರ್ಷಗಳವರೆಗಿನ ಅವಧಿಯಲ್ಲಿ ಬಾಷ್ಯಾಕಾಶದ ಅಪಾಯಕಾರಿ ವಿಶ್ವಕಿರಣಗಳಿಗೆ ಮೈ ಒಡ್ಡಿದರೂ ಏನೂ ಆಗಲಾರದು. ಇಡೀ ಭೂಮಿಯ ಜನರ ಜಾತಿ, ಕುಲ, ಗೋತ್ರ, ಬಣ್ಣ ಮೈಕಟ್ಟು, ಮುಖಲಕ್ಷಣ ರಕ್ತಗುಣದ ಸ್ಯಾಂಪಲ್‌ಗಳನ್ನು ಬೇರೆ ಬೇರೆಯಾಗಿ ಸಂಗ್ರಹಿಸಿ ಒಂದು ಗಾಜಿನ ಫಲಕಗಳಲ್ಲಿ ಇಡಲಾಗಿದೆ. ಕೃತಕ ವಜ್ರದಲ್ಲಿ ೪ ಚಿನ್ನದ ಮಾತ್ರೆಗಳನ್ನು, ಇಂದಿನ ಮಣ್ಣು ಒಂದು ಹನಿ ಸಮುದ್ರದ ನೀರು, ಗಾಳಿ ಮತ್ತು ರಕ್ತದ ಒಂದು ಹನಿಗಳನ್ನು ಸಹ ಭದ್ರ ಪಡಿಸಿ ಇದರೊಳಗಿಡಲಾಗಿದೆ. ಮನುಷ್ಯರ DNA ಸರಪಳಿಯನ್ನು ಆ ವಜ್ರದ ಮೇಲೆ ಕೊರೆಯಲಾಗುತ್ತದೆ.

ಇಷ್ಟಲ್ಲದೇ ಕಾಂಪಾಕ್ಟ್ ಡಿಸ್ಕ್‌ಗಳನ್ನು ಸಹ ಸೇರಿಸಿ ಇಡಲಾಗಿದೆ. ೨೧ ನೇ ಶತಮಾನದ ಆರಂಭದಲ್ಲಿ ನಾವು ಹೇಗಿದ್ದೇವೆ ಎಂದು ಕೋಟ್ಯಾಂತರ ಜನರು ಸ್ವಾವಲೋಕನ ಮಾಡಿಕೊಂಡು ಸಂದೇಶ ರವಾನಿಸತೊಡಗಿದ್ದಾರೆ. ಇಂಥಹ ಕಾಲಜ್ಞಾನವೊಂದು ದಿ|| ಪ್ರಧಾನಿ ಇಂದಿರಾಗಾಂಧೀಯವರ ಕಾಲದಲ್ಲಿ ಭೂಗರ್ಭದಲ್ಲಿ ಒಂದು ಕಾಲಕೋಳದಲ್ಲಿ ಹೂಳಲಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...