Home / ಲೇಖನ / ವಿಜ್ಞಾನ / ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ “ವಿಶ್ವಸ್ತನಪಾನ” ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರುವ ಮೋಹವನ್ನು, ಎದೆಹಾಲಿನ ಬಗೆಗೆ ಬೆಳದಿರುವ ಮೌಢ್ಯವನ್ನು ವಿಜ್ಞಾನವೆಂಬ ಹರಿತವಾದ ಕತ್ತರಿಯಿಂದ ಕತ್ತರಿಸಿ ಹಾಕಲು ಈ ಸಂಸ್ಥೆ ನಿರಂತರ ಸೇವೆ ಸಲ್ಲಿಸುತ್ತಲ್ಲಿದೆ. ಕೃತಕವಾದ ಡಬ್ಬಿಹಾಲನ್ನು ತಿರಸ್ಕರಿಸಿ ಕೇವಲ ತಾಯಿಯ ಹಾಲನ್ನೆ ಮಗುವಿಗೆ ಉಣಬಡಿಸಲು ಶ್ರಮಿಸುತ್ತಿರುವ ಆಸ್ಪತ್ರೆ, ಇತರ ಸಂಸ್ಥೆಗಳಿಗೆ (ಸ್ತನ ಪಾನ ಉತ್ತೇಜಕ ಸಂಸ್ಥೆಗಳು) ಮಕ್ಕಳ ಸ್ನೇಹ ಪರ (Baby Friendly) ಆಸ್ಪತ್ರೆ ಎಂಬ ಪ್ರಮಾಣಪತ್ರದ ಬಿರುದನ್ನು ವಿಶ್ವಮಟ್ಟದ ಸಂಸ್ಥೆ ನೀಡುತ್ತದೆ.

ತಾಯಿಯ ಹಾಲು ಜಗತ್ತಿನಲ್ಲಿಯೇ ಶ್ರೇಷ್ಠವಾದ ಮಕ್ಕಳಿಗೆ ಪೋಷಕಾಂಶ ನೀಡುವ ವಸ್ತುವಾಗಿದೆ. ಮಗುವಿನ ಸಮಸ್ತ ಪೋಷಕಾಂಶಗಳ ಖಣಜ. ನವಜಾತ ಶಿಶುವಿಗೆ ಮೊದಲು ರೋಗ ನಿರೋಧಕ ಶಕ್ತಿ ಸಂಚಯವಾಗುವುದು, ತಾಯಿಯ ಎದೆ ಹಾಲಿನಿಂದ ಮಾತ್ರ ಹೆರಿಗೆಯಾದ ನಂತರ ತಾಯಿಯ ಎದೆಯಲ್ಲಿ ವಸರುವ ಗಟ್ಟಿಹಾಲು (ಕೊಲೆಸ್ಟರಂ) ರೋಗ ನಿರೋಧಕ ಶಕ್ತಿಯ ಭಂಡಾರವೆನಿಸಿದೆ. ಈ ಗಟ್ಟಿ ಹಾಲು ‘ಗೀಬು’ ಎಂದು ಚಲ್ಲುವ ಕೆಟ್ಟ ಸಂಪ್ರದಾಯ ಬಂದಿದೆ. ಮಗು ಹುಟ್ಟಿದ ೬ ಗಂಟೆಯೊಳಗೆ ಮಗುವಿಗೆ ಎದೆ ಚೀಪಿಸಲು ಬಿಡಬೇಕು. ತಾಯಿಯ ಹಾಲನ್ನೇ ಕುಡಿದು ಬೆಳೆದ ಮಗು ದೊಡ್ಡದಾದಾಗ ಬಿ.ಪಿ. ಬೊಜ್ಜು, ಹೃದಯಾಫಾತ, ಸಕ್ಕರೆಕಾಯಿಲೆ, ಕ್ಯಾನ್ಸ್‌ರ್ ಮುಂತಾದ ಮಾರಕ ರೋಗಗಳಿಗೆ ತುತ್ತಾಗುವುದು ಅತಿವಿರಳವೆಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಧೂಮಪಾನ, ಮಧ್ಯಪಾನ, ಲೈಂಗಿಕ ಅಪರಾಧ, ಮಾಧಕ ಔಷಧಿಗಳ ಚಟ ಮುಂತಾದ ಸಮಾಜ ವಿರೋಧಿ ನಡವಳಿಕೆಗಳು ಎದೆ ಹಾಲು ಕುಡಿದು ಬೆಳೆದ ಮಕ್ಕಳಲ್ಲಿ ಕಡಿಮೆ. ಮಗು ತಾಯಿಯ ಹಾಲನ್ನು ಚೀಪಿ ಚೀಪಿ ಹೀರುವಾಗ ಮಗುವಿನ ಮುಖಕ್ಕೆ ದೊರೆಯುವ ವ್ಯಾಯಾಮದಿಂದಾಗಿ ಮಗುವಿನ ಮುಖ ಸುಂದರವಾಗಿ ರೂಪುಗೊಳ್ಳುತ್ತದೆ. ತಾಯಿಯ ಎದೆಹಾಲು ಕುಡಿದು ಬೆಳೆದ ಮಕ್ಕಳಿಗೆ ಬೇಧಿ, ಶೀತ, ಜ್ವರ, ನ್ಯೂಮೋನಿಯಾ, ಕ್ಷಯಾ ಹಾಗೂ ಜಂತು ರೋಗಗಳು ಕಡಿಮೆ ಪ್ರಮಾಣದಲ್ಲಿರುತ್ತದೆ.

ಗರ್ಭಿಣಿಯಾಗಿದ್ದಾಗ ಹಿಗ್ಗಿದ್ದ ಗರ್ಭಕೋಶ ಬೇಗನೇ ಸುಸ್ಥಿತಿಗೆ ಮರಳಲು ಸ್ತನ ಪಾನ ಸೂಕ್ತ ಪರಿಹಾರ. ತಾಯಿಗೆ ಇದರಿಂದ ಸ್ತನದ ಕ್ಯಾನರ್ ಬರುವುದಿಲ್ಲ. ಸೌಂದರ್ಯ ಕ್ಷೀಣಿಸುತ್ತದೆ ಎಂಬ ತಪ್ಪು ಕಲ್ಬನೆಯಿಂದ ಬಹಳೇ ಮಹಿಳೆಯರು ಮಕ್ಕಳಿಗೆ ಹಾಲು ಕುಡಿಸಲು ಹಿಂಜರಿಯುತ್ತಾರೆ. ವಾಸ್ತವವಾಗಿ ಸ್ತನ ಪಾನದಿಂದ ತಾಯಿಯ ದೇಹದ ಕೊಬ್ಬು ಕರಗಿ ಸೌಂದರ್ಯ ಅಧಿಕಗೊಳ್ಳುತ್ತದೆ. ಈ ಕಾರಣವಾಗಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕೆಂಬ ಆಕಾಂಕ್ಷೆಹೊಂದಿದ ಮಕ್ಕಳ ತಾಯಂದಿರು ಹೆಚ್ಚು ಹೆಚ್ಚು ಮಕ್ಕಳಿಗೆ ಸ್ತನ ಪಾನ, ಮಾಡಿಸುತ್ತಿರಬೇಕು. ಇದು ನಿಸರ್ಗದ ಸತ್ಯ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...