ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂ‌ಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medician ನ ಡಾ|| ಜಿಯೆಂಗ್ ಹೀ ಮತ್ತು ಅವರ ತಂಡವು ಇದರ ಸೇವನೆಯಿಂದ “ಬ್ರೇನ್ ಹ್ಯಾಮರೇಜ್” ಆಕ್ರಮಣವಾಗುತ್ತದೆಂದು ಪ್ರಯೋಗಗಳಿಂದ ಸ್ಥಿರೀಕರಿಸಿದ್ದಾರೆ. ಜತೆಗೆ ಇಸೆಮಿಕ್ ಕೂಡ ಆಕ್ರಮಿಸುತ್ತದೆಂದು ಹೇಳುತ್ತಾರೆ.

ಇದನ್ನು ಸೇವಿಸುವುದರಿಂದ ದಮನಿಗಳಲ್ಲಿ ಅಡಚಣೆಯುಂಟಾಗಿ ಪರಿಣಾಮವಾಗಿ ಮೆದುಳಿಗೆ ರಕ್ತ ಹಾಗೂ ಪ್ರಾಣವಾಯುವಿನ ಪೂರೈಕೆಯು ಆಗುವುದಿಲ್ಲವೆಂದು ವಿವರಿಸುತ್ತಾರೆ. ವೃದ್ಧರು ವಿಶೇಷವಾಗಿ ಹೈಬ್ಲಡ್ ಪ್ರೆಶರ್ ಇರುವ ರೋಗಿಗಳಿಗೆ ಬ್ರೇನ್ ಹ್ಯಾಮರೇಜಿನ ಅಪಾಯ ಹೆಚ್ಚಾಗಿರುತ್ತದೆ. ವಿಪರೀತ ತಲೆನೋವು, ಒಮ್ಮಲೆ – ಮೂರ್ಚೆ ಹೋಗುವುದು, ಧ್ವನಿಬಾರದಿರುವುದು. ಮುಖ ಹಾಗು ಕೈ ಕಾಲುಗಳಲ್ಲಿ ಲಕ್ವ ಹೊಡೆದಂತಾಗಿ ನಿಶಕ್ತಿ ಆವರಿಸುವುದು ಮುಂತಾದವು ಇದರ ಲಕ್ಷಣಗಳಾಗಿವೆ.

ಹೀ ಮತ್ತು ಇವರ ಅನುಮಾಯಿಗಳು ೧೮ ವಿಭಿನ್ನ ಪರೀಕ್ಷೆಗಳಲ್ಲಿ೫೫,೪೬೨ ರೋಗಿಗಳಿಗೆ ಆಸ್ಟ್ರೀನ್ ಸೇವನೆ ಮಾಡಿಸಿ ನಂತರ ಪರೀಕ್ಷಿಸಿದಾಗ ಇವರಲ್ಲಿ ಶೇ. ೧೫ ರಷ್ಟು ರೋಗಿಗಳಿಗೆ ಬ್ರೇನ್ ಹ್ಯಾಮರೇಜ್ ಆಕ್ರಮಣವಾದುದು ದೃಢಪಟ್ಟಿತು. ಉಳಿದಂತೆ ರೋಗಿಗಳಿಗೆ ಇಸೆಮಿಕ್ ಅಟ್ಯಾಕ್ ಆಗಿತ್ತು. ಆದ್ದರಿಂದ ನೋವು ನಿವಾರಕವೆಂದು ಇದನ್ನು ಸೇವಿಸುವ ರೋಗಿಗಳು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಿ ಸೇವಿಸುವುದು ಅಗತ್ಯ. ಕೆಲವು ಔಷಧಿಗಳು ತಕ್ಷಣಕ್ಕೆ ಪರಿಹಾರವನ್ನು ಸೂಚಿಸಿದರೂ ನಿಧಾನವಾಗಿ ಸ್ಲೋಪಾಯಿಜನ್ ಆಗುವ ಭೀತಿ ಇರುತ್ತದೆ. ಹಾಗಾದರೆ ಈ ದೇಹ ನೆಟ್ಟಗಿರಬೇಕಾದರೆ ಯಾವುದನ್ನು ಸೇವಿಸಬೇಕು? ಎಲ್ಲವನ್ನು ಒಬ್ಬ ಸಾಮಾನ್ಯ ರೋಗಿ ವೈಜ್ಞಾನಿಕವಾಗಿ ಪರೀಕ್ಷೆಗೆ ಗುರಿ ಮಾಡುತ್ತಾನೆಯೋ? ಎಂಬ ಪ್ರಶ್ನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರಹ ಗಾಥೆ
Next post ದೀಪವಾಗು ಗೆಳೆಯ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…