Home / ಲೇಖನ / ವಿಜ್ಞಾನ / ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂ‌ಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medician ನ ಡಾ|| ಜಿಯೆಂಗ್ ಹೀ ಮತ್ತು ಅವರ ತಂಡವು ಇದರ ಸೇವನೆಯಿಂದ “ಬ್ರೇನ್ ಹ್ಯಾಮರೇಜ್” ಆಕ್ರಮಣವಾಗುತ್ತದೆಂದು ಪ್ರಯೋಗಗಳಿಂದ ಸ್ಥಿರೀಕರಿಸಿದ್ದಾರೆ. ಜತೆಗೆ ಇಸೆಮಿಕ್ ಕೂಡ ಆಕ್ರಮಿಸುತ್ತದೆಂದು ಹೇಳುತ್ತಾರೆ.

ಇದನ್ನು ಸೇವಿಸುವುದರಿಂದ ದಮನಿಗಳಲ್ಲಿ ಅಡಚಣೆಯುಂಟಾಗಿ ಪರಿಣಾಮವಾಗಿ ಮೆದುಳಿಗೆ ರಕ್ತ ಹಾಗೂ ಪ್ರಾಣವಾಯುವಿನ ಪೂರೈಕೆಯು ಆಗುವುದಿಲ್ಲವೆಂದು ವಿವರಿಸುತ್ತಾರೆ. ವೃದ್ಧರು ವಿಶೇಷವಾಗಿ ಹೈಬ್ಲಡ್ ಪ್ರೆಶರ್ ಇರುವ ರೋಗಿಗಳಿಗೆ ಬ್ರೇನ್ ಹ್ಯಾಮರೇಜಿನ ಅಪಾಯ ಹೆಚ್ಚಾಗಿರುತ್ತದೆ. ವಿಪರೀತ ತಲೆನೋವು, ಒಮ್ಮಲೆ – ಮೂರ್ಚೆ ಹೋಗುವುದು, ಧ್ವನಿಬಾರದಿರುವುದು. ಮುಖ ಹಾಗು ಕೈ ಕಾಲುಗಳಲ್ಲಿ ಲಕ್ವ ಹೊಡೆದಂತಾಗಿ ನಿಶಕ್ತಿ ಆವರಿಸುವುದು ಮುಂತಾದವು ಇದರ ಲಕ್ಷಣಗಳಾಗಿವೆ.

ಹೀ ಮತ್ತು ಇವರ ಅನುಮಾಯಿಗಳು ೧೮ ವಿಭಿನ್ನ ಪರೀಕ್ಷೆಗಳಲ್ಲಿ೫೫,೪೬೨ ರೋಗಿಗಳಿಗೆ ಆಸ್ಟ್ರೀನ್ ಸೇವನೆ ಮಾಡಿಸಿ ನಂತರ ಪರೀಕ್ಷಿಸಿದಾಗ ಇವರಲ್ಲಿ ಶೇ. ೧೫ ರಷ್ಟು ರೋಗಿಗಳಿಗೆ ಬ್ರೇನ್ ಹ್ಯಾಮರೇಜ್ ಆಕ್ರಮಣವಾದುದು ದೃಢಪಟ್ಟಿತು. ಉಳಿದಂತೆ ರೋಗಿಗಳಿಗೆ ಇಸೆಮಿಕ್ ಅಟ್ಯಾಕ್ ಆಗಿತ್ತು. ಆದ್ದರಿಂದ ನೋವು ನಿವಾರಕವೆಂದು ಇದನ್ನು ಸೇವಿಸುವ ರೋಗಿಗಳು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಿ ಸೇವಿಸುವುದು ಅಗತ್ಯ. ಕೆಲವು ಔಷಧಿಗಳು ತಕ್ಷಣಕ್ಕೆ ಪರಿಹಾರವನ್ನು ಸೂಚಿಸಿದರೂ ನಿಧಾನವಾಗಿ ಸ್ಲೋಪಾಯಿಜನ್ ಆಗುವ ಭೀತಿ ಇರುತ್ತದೆ. ಹಾಗಾದರೆ ಈ ದೇಹ ನೆಟ್ಟಗಿರಬೇಕಾದರೆ ಯಾವುದನ್ನು ಸೇವಿಸಬೇಕು? ಎಲ್ಲವನ್ನು ಒಬ್ಬ ಸಾಮಾನ್ಯ ರೋಗಿ ವೈಜ್ಞಾನಿಕವಾಗಿ ಪರೀಕ್ಷೆಗೆ ಗುರಿ ಮಾಡುತ್ತಾನೆಯೋ? ಎಂಬ ಪ್ರಶ್ನೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...