ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾಯಿಲೆಯನ್ನು ಕಂಡು ಹಿಡಿಯಬಲ್ಲ ಕಂಪ್ಯೂಟರ್ ಚಿಪ್‌ಗಳು ಬರಲಿವೆ. ವ್ಯಕ್ತಿಯ ಅಂಗಾಂಗದ ಒಂದು ಕೋಶ ಒಳಗೆ ಇರುವ ಜೀನ್ ಅನ್ನು ಪರೀಕ್ಷಿಸಿ ಮುಂದೆ ಕ್ಯಾನ್ಸರ್ ಬರಲಿದೆಯೇ, ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆಗಳಿವೆಯೇ? ಎಂದು ಈ ಚಿಪ್‌ನಿಂದ ನಿಖರವಾಗಿ ಹೇಳಬಹುದು.

ನಿರ್ದಿಷ್ಟ ಅನುಕ್ರಮದ D.N.A.ಎಳೆಯನ್ನು ಕಂಪ್ಯೂಟರ್ ಭಾಷೆಯಲ್ಲಿ ಈ ಚಿಪ್‌ನಲ್ಲಿ ಬರೆದಿಡಲಾಗುತ್ತದೆ. ದೇಹದ ಕೋಶ ಒಂದರಲ್ಲಿ ಇರುವ ಡಿ.ಎನ್.ಎ ಎಳೆಯನ್ನು ಅದರೊಂದಿಗೆ ಹೋಲಿಸಿ ನೋಡಿ, ಯಾವ ಜೀನ್ ನ್ಯೂನ್ಯತೆಯಿಂದ ಕೂಡಿದೆ, ಎಂದು ಕ್ಷಣಾರ್ಧದೊಳಗೆ ಕಂಡು ಹಿಡಿದು ಈ ಚಿಪ್‌ನ ಸಹಾಯದಿಂದ ಯಾವ ಕಾಯಿಲೆ ಬರುತ್ತದೆಂದು ತಿಳಿಯಬಹುದು. ಒಂದು ವೇಳೆ ದೇಹದಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದರೆ ಅದು ಯಾವ ಹಂತದಲ್ಲಿದೆ. ದೇಹದ ಯಾವೆಲ್ಲ ಭಾಗಕ್ಕೆ ಈಗಾಗಲೇ ಹರಡಿದೆ? ಎಂಬುವುದು ಕ್ಯಾನ್ಸರ್‌ಗೆ ತುತ್ತಾದ ಕೋಶಗಳು ಕಾಯಿಲೆಗಳು ಗಂಭೀರತೆಗನುಗುಣವಾಗಿ ಬೆಳಕನ್ನು ಹೊರ ಸೂಸುವ
ಮೂಲಕ ತಿಳಿಸುತ್ತವೆ.

ಎಷ್ಟೊ ಸಲ ಕೆಲವೊಂದು ಕಾಯಿಲೆಗಳು ವೈದ್ಯರು ಪರೀಕ್ಷಿಸಿ ನೋಡಿ ಮದ್ದುಕೊಟ್ಟರೂ ಗುಣವಾಗದಿರುವುದು ಉಂಟು. ವೈದ್ಯರ ಪ್ರಕಾರ ಇದು ಸಾಮಾನ್ಯ ಕಾಯಿಲೆ ಆಗಿರಬಹುದು. ಆದರೆ ಅದು ಗುಣವಾಗದಿರುವುಕ್ಕೂ ದೇಹದ ಜೀನ್‌ಗಳಿಗೂ ಪರಸ್ಪರ ಸಂಬಂಧ ಇರುತ್ತದೆ. ಯಾವ ಜೀನ್ ನ್ಯೂನ್ಯತೆಗೊಳಗಾಗಿದೆ ಎಂದು ನಿಖರವಾಗಿ ಪತ್ತೆಹಚ್ಚಿ ಅದಕ್ಕನುಗುಣವಾಗಿ ಸೂಕ್ತ ಚಿಕಿತ್ಸೆ ಕೊಟ್ಟಾಗಲಷ್ಟೇ ಆ ವ್ಯಕ್ತಿ ಗುಣಮುಖವಾಗಲು ಸಾಧ್ಯ ಎಂದು ಕಂಡು ಹಿಡಿಯಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸನ್ಯಾಸಿ
Next post ಸೂಜಿ-ದಾರ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys