ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬರುವುದೆಂದರೆ ಬೇಡವೆಂದವರಾರು? ಇಂಥಹ ಬರಡು ಭೂಮಿಯನ್ನು ಸಂಪದ್ಭರಿತ ಗೊಳಿಸುವಲ್ಲಿ ಪ್ರಯತ್ನ ಪೂರ್ವಕವಾಗಿ ಶೋಧನೆ ನಡಿಸಿ ಫಲಕಂಡರು. ಉತ್ತರ ಪ್ರದೇಶದ ಕಬ್ಬು ಸಂಶೋಧನಾ ಮಂಡಳಿಯ ವಿಜ್ಞಾನಿಗಳು. ಸಕ್ಕರೆ ಕಾರ್ಖಾನೆಗಳಲ್ಲಿತಯಾರಾಗುವ ಅದರ ಕೊಳೆಯನ್ನು ಜೈವಿಕ ಕಾರ್ಬೋನಿಕ್ ಗೊಬ್ಬರವಾಗಿ ಪರಿವರ್ತಿಸಿ ಗದ್ದೆಹೊಲಗಳಿಗೆ ಹಾಕಿದರೆ ಸಾಕು. ಬಂಜರುತನ ಕಳೆದುಕೊಂಡು ಫಲವತ್ತೆಗೊಳ್ಳುತ್ತದೆ. ಸಕ್ಕರೆಯ ಕೊಳೆಯಲ್ಲಿ ರಾಸಾಯನಿಕ ಕ್ರಿಯೆ ಹೊಂದಿ ಶೇ. ೩೪ ಜೈವಿಕ್ ಕಾರ್ಬನ್, ಶೇ. ೧.೬೩ ನೆಟ್ರೋಜಿನ್ ಶೇ. ೨.೫೨ ಪಾಸ್ಫೇಟ್, ಶೇ. ೦.೫೫ ಪೋಟ್ಯಾಶ್, ಶೇ ೪.೭೪ ಕ್ಯಾಲ್ಸಿಯಂ ಆಕ್ಸೈಡ್ ಅಲ್ಲದೆ ಕಬ್ಬಿಣ ಮ್ಯಾಂಗನೀಸ್ ಮತ್ತು ಜಿಂಕ್ ಸಹ ಅಡಕವಾಗಿರುತ್ತದೆ.

ಈ ಸಕ್ಕರೆಯ ಕೊಳೆಯಲ್ಲಿರುವ ಜೈವಿಕ ಕಾರ್ಬನನ್ನು ಗೊಬ್ಬರವಾಗಿ ಉಪಯೋಗಿಸುವುದರಿಂದ ಭೂಮಿಯ ಭೌತಿಕ ಸ್ವರೂಪವು, ಜಲರಕ್ಷಣೆಯ ಸಾಮರ್ಥ್ಯ ಹಾಗೂ ಫಲವತ್ತತೆಯಲ್ಲಿ ಅಭಿವೃದ್ದಿ ಆಗುವುದು ಮತ್ತು ಜಮೀನಿನೊಳಗೆ ವಾಯುವಿನ ಸುಗಮ ಚಲನವಲನಕ್ಕೂ ಅನುಕೂಲವಾಗುವುದು. ಇದರ ಬಳಕೆಯ ಕುರಿತು ವಿಜ್ಞಾನಿಗಳು ರೈತರಿಗೆ ಒಂದು ಎಚ್ಚರಿಕೆಯನ್ನು ನೀಡುತ್ತಾರೆ. ಇದನ್ನು ನೇರವಾಗಿ ಹೊಲದಲ್ಲಿ ಹಾಕದೇ ಸಗಣಿ, ಸೊಪ್ಪು, ಕಸಕಡ್ಡಿ ಒಂದಿಷ್ಟು ಪಾಸ್ಫೇಟ್ ಹಾಗೂ ಜೀವಾಣು ಪಲ್ಪರ್ ಸೇರಿಸಿ ಕನಿಷ್ಟ ೯೦ ದಿನಗಳವರೆಗೆ ಕೊಳೆಯಿಸಿ ನಂತರವೇ ಗದ್ದೆಗಳಲ್ಲಿ ಪ್ರಯೋಗಿಸಬೇಕು. ಇದರಂತೆ ಒದಗಿಸಿದಲ್ಲಿ ಬಂಜರು ಭೂಮಿಯನ್ನು ಫಲವತ್ತತೆಯನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಕಂಡು ಹಿಡಿದ ಈ ನಾಡಿನಲ್ಲಿ೩೨ ಲಕ್ಷ ರೈತರು ೨೦ ಲಕ್ಷ ಹೆಕ್ಟೇರುಗಳಲ್ಲಿ ಇದನ್ನು ಹಾಕಿ ಕೃಷಿ ಮಾಡುತ್ತಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಲೆದಿಂಬು
Next post ಅಮ್ಮ ನಿನ್ನ ಮಡಿಲಲ್ಲೊಮ್ಮೆ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…