Home / ಲೇಖನ / ಕೃಷಿ / ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬರುವುದೆಂದರೆ ಬೇಡವೆಂದವರಾರು? ಇಂಥಹ ಬರಡು ಭೂಮಿಯನ್ನು ಸಂಪದ್ಭರಿತ ಗೊಳಿಸುವಲ್ಲಿ ಪ್ರಯತ್ನ ಪೂರ್ವಕವಾಗಿ ಶೋಧನೆ ನಡಿಸಿ ಫಲಕಂಡರು. ಉತ್ತರ ಪ್ರದೇಶದ ಕಬ್ಬು ಸಂಶೋಧನಾ ಮಂಡಳಿಯ ವಿಜ್ಞಾನಿಗಳು. ಸಕ್ಕರೆ ಕಾರ್ಖಾನೆಗಳಲ್ಲಿತಯಾರಾಗುವ ಅದರ ಕೊಳೆಯನ್ನು ಜೈವಿಕ ಕಾರ್ಬೋನಿಕ್ ಗೊಬ್ಬರವಾಗಿ ಪರಿವರ್ತಿಸಿ ಗದ್ದೆಹೊಲಗಳಿಗೆ ಹಾಕಿದರೆ ಸಾಕು. ಬಂಜರುತನ ಕಳೆದುಕೊಂಡು ಫಲವತ್ತೆಗೊಳ್ಳುತ್ತದೆ. ಸಕ್ಕರೆಯ ಕೊಳೆಯಲ್ಲಿ ರಾಸಾಯನಿಕ ಕ್ರಿಯೆ ಹೊಂದಿ ಶೇ. ೩೪ ಜೈವಿಕ್ ಕಾರ್ಬನ್, ಶೇ. ೧.೬೩ ನೆಟ್ರೋಜಿನ್ ಶೇ. ೨.೫೨ ಪಾಸ್ಫೇಟ್, ಶೇ. ೦.೫೫ ಪೋಟ್ಯಾಶ್, ಶೇ ೪.೭೪ ಕ್ಯಾಲ್ಸಿಯಂ ಆಕ್ಸೈಡ್ ಅಲ್ಲದೆ ಕಬ್ಬಿಣ ಮ್ಯಾಂಗನೀಸ್ ಮತ್ತು ಜಿಂಕ್ ಸಹ ಅಡಕವಾಗಿರುತ್ತದೆ.

ಈ ಸಕ್ಕರೆಯ ಕೊಳೆಯಲ್ಲಿರುವ ಜೈವಿಕ ಕಾರ್ಬನನ್ನು ಗೊಬ್ಬರವಾಗಿ ಉಪಯೋಗಿಸುವುದರಿಂದ ಭೂಮಿಯ ಭೌತಿಕ ಸ್ವರೂಪವು, ಜಲರಕ್ಷಣೆಯ ಸಾಮರ್ಥ್ಯ ಹಾಗೂ ಫಲವತ್ತತೆಯಲ್ಲಿ ಅಭಿವೃದ್ದಿ ಆಗುವುದು ಮತ್ತು ಜಮೀನಿನೊಳಗೆ ವಾಯುವಿನ ಸುಗಮ ಚಲನವಲನಕ್ಕೂ ಅನುಕೂಲವಾಗುವುದು. ಇದರ ಬಳಕೆಯ ಕುರಿತು ವಿಜ್ಞಾನಿಗಳು ರೈತರಿಗೆ ಒಂದು ಎಚ್ಚರಿಕೆಯನ್ನು ನೀಡುತ್ತಾರೆ. ಇದನ್ನು ನೇರವಾಗಿ ಹೊಲದಲ್ಲಿ ಹಾಕದೇ ಸಗಣಿ, ಸೊಪ್ಪು, ಕಸಕಡ್ಡಿ ಒಂದಿಷ್ಟು ಪಾಸ್ಫೇಟ್ ಹಾಗೂ ಜೀವಾಣು ಪಲ್ಪರ್ ಸೇರಿಸಿ ಕನಿಷ್ಟ ೯೦ ದಿನಗಳವರೆಗೆ ಕೊಳೆಯಿಸಿ ನಂತರವೇ ಗದ್ದೆಗಳಲ್ಲಿ ಪ್ರಯೋಗಿಸಬೇಕು. ಇದರಂತೆ ಒದಗಿಸಿದಲ್ಲಿ ಬಂಜರು ಭೂಮಿಯನ್ನು ಫಲವತ್ತತೆಯನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಕಂಡು ಹಿಡಿದ ಈ ನಾಡಿನಲ್ಲಿ೩೨ ಲಕ್ಷ ರೈತರು ೨೦ ಲಕ್ಷ ಹೆಕ್ಟೇರುಗಳಲ್ಲಿ ಇದನ್ನು ಹಾಕಿ ಕೃಷಿ ಮಾಡುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...