Home / ಲೇಖನ / ಕೃಷಿ / ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬರುವುದೆಂದರೆ ಬೇಡವೆಂದವರಾರು? ಇಂಥಹ ಬರಡು ಭೂಮಿಯನ್ನು ಸಂಪದ್ಭರಿತ ಗೊಳಿಸುವಲ್ಲಿ ಪ್ರಯತ್ನ ಪೂರ್ವಕವಾಗಿ ಶೋಧನೆ ನಡಿಸಿ ಫಲಕಂಡರು. ಉತ್ತರ ಪ್ರದೇಶದ ಕಬ್ಬು ಸಂಶೋಧನಾ ಮಂಡಳಿಯ ವಿಜ್ಞಾನಿಗಳು. ಸಕ್ಕರೆ ಕಾರ್ಖಾನೆಗಳಲ್ಲಿತಯಾರಾಗುವ ಅದರ ಕೊಳೆಯನ್ನು ಜೈವಿಕ ಕಾರ್ಬೋನಿಕ್ ಗೊಬ್ಬರವಾಗಿ ಪರಿವರ್ತಿಸಿ ಗದ್ದೆಹೊಲಗಳಿಗೆ ಹಾಕಿದರೆ ಸಾಕು. ಬಂಜರುತನ ಕಳೆದುಕೊಂಡು ಫಲವತ್ತೆಗೊಳ್ಳುತ್ತದೆ. ಸಕ್ಕರೆಯ ಕೊಳೆಯಲ್ಲಿ ರಾಸಾಯನಿಕ ಕ್ರಿಯೆ ಹೊಂದಿ ಶೇ. ೩೪ ಜೈವಿಕ್ ಕಾರ್ಬನ್, ಶೇ. ೧.೬೩ ನೆಟ್ರೋಜಿನ್ ಶೇ. ೨.೫೨ ಪಾಸ್ಫೇಟ್, ಶೇ. ೦.೫೫ ಪೋಟ್ಯಾಶ್, ಶೇ ೪.೭೪ ಕ್ಯಾಲ್ಸಿಯಂ ಆಕ್ಸೈಡ್ ಅಲ್ಲದೆ ಕಬ್ಬಿಣ ಮ್ಯಾಂಗನೀಸ್ ಮತ್ತು ಜಿಂಕ್ ಸಹ ಅಡಕವಾಗಿರುತ್ತದೆ.

ಈ ಸಕ್ಕರೆಯ ಕೊಳೆಯಲ್ಲಿರುವ ಜೈವಿಕ ಕಾರ್ಬನನ್ನು ಗೊಬ್ಬರವಾಗಿ ಉಪಯೋಗಿಸುವುದರಿಂದ ಭೂಮಿಯ ಭೌತಿಕ ಸ್ವರೂಪವು, ಜಲರಕ್ಷಣೆಯ ಸಾಮರ್ಥ್ಯ ಹಾಗೂ ಫಲವತ್ತತೆಯಲ್ಲಿ ಅಭಿವೃದ್ದಿ ಆಗುವುದು ಮತ್ತು ಜಮೀನಿನೊಳಗೆ ವಾಯುವಿನ ಸುಗಮ ಚಲನವಲನಕ್ಕೂ ಅನುಕೂಲವಾಗುವುದು. ಇದರ ಬಳಕೆಯ ಕುರಿತು ವಿಜ್ಞಾನಿಗಳು ರೈತರಿಗೆ ಒಂದು ಎಚ್ಚರಿಕೆಯನ್ನು ನೀಡುತ್ತಾರೆ. ಇದನ್ನು ನೇರವಾಗಿ ಹೊಲದಲ್ಲಿ ಹಾಕದೇ ಸಗಣಿ, ಸೊಪ್ಪು, ಕಸಕಡ್ಡಿ ಒಂದಿಷ್ಟು ಪಾಸ್ಫೇಟ್ ಹಾಗೂ ಜೀವಾಣು ಪಲ್ಪರ್ ಸೇರಿಸಿ ಕನಿಷ್ಟ ೯೦ ದಿನಗಳವರೆಗೆ ಕೊಳೆಯಿಸಿ ನಂತರವೇ ಗದ್ದೆಗಳಲ್ಲಿ ಪ್ರಯೋಗಿಸಬೇಕು. ಇದರಂತೆ ಒದಗಿಸಿದಲ್ಲಿ ಬಂಜರು ಭೂಮಿಯನ್ನು ಫಲವತ್ತತೆಯನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಕಂಡು ಹಿಡಿದ ಈ ನಾಡಿನಲ್ಲಿ೩೨ ಲಕ್ಷ ರೈತರು ೨೦ ಲಕ್ಷ ಹೆಕ್ಟೇರುಗಳಲ್ಲಿ ಇದನ್ನು ಹಾಕಿ ಕೃಷಿ ಮಾಡುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್