Home / ಲೇಖನ / ಹಾಸ್ಯ / ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿ- “ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ. ವೈದು ಟಾಂಗಾದಾಗ ಇಡಪಾ. ನೀ ಬ್ಯಾಡ ಮಲ್ಯಾ. ಈಗಽ ಮೈಲಿಗಿ ಮಾಡಬ್ಯಾಡ, ಗೋವಿಂದಾ ನೀ ಒಯ್ದು ಇಡ ಬಾಳಾ. ಹಿಂದಿನ ಮಗ್ಗಲ ಇಡು. ಟಾಂಗಾದ ಇಮಾಮಗ ಮುಟ್ಟಿಸ ಬ್ಯಾಡ.

ಹೋಗಿಬರ್‍ತಿನಾ ಗಂಗಾಬಾಯಿ, ಹುಡುಗುರು ಹುಪ್ಚಿ ಜ್ವಾಕೀಲೆ ಇರ್‍ಯಾಽ. ಅಂದಾಕರಾ ಉಲಳಕೋಚಿ ಹುಡುಗರು. ಭಾವಿಕಡೆ ಹೋಗ್ಗೊಡ ಬ್ಯಾಡಾ. ಭಾಂವ್ಯಾಗ ಹಣಿಕಿ ಹಾಕ್ಯಾವು ಎಲ್ಯಾರೆ. ಒಂದು ಹೋಗಿ ಒಂದು ಆದೀತು. ಹಿಂದಿನ ಬಾಗಲಾನ ಇಕ್ಕಿ ಚಿಲಕಾ ಹಾಕು. ಅಂದರ ನಿಶ್ಚಿಂತಿ ಆಗತದ. ಇಷ್ಟು ಹುಡುಗುರ್‍ನ ಕಟಿಕೊಂಡು ಹ್ಯಾಂಗ ಇರ್‍ತೀಯೋ ಏನೋ. ಇದೇ ಚಿಂತಿ ಹತ್ತೇದ ನನಗ. ಅವು ಕಿರಿಕಿರಿ ಮಾಡತಾವಂತ ಸಿಕ್ಕದ್ದ ತಿನ್ಲಿಕ್ಕೆ ಕೊಡಬ್ಯಾಡ. ಬ್ಯಾಸಿಗೆ ದಿವಸ ನೀರು ಕುಡಕುಡದು ಜಡ್ಡಾಗ್ತದ ಹುಡುಗರಿಗೆ. ಮನ್ಯಾಗೇನಾರ ಮಾಡಿದರ ಇರಿವಿ ಮುಕರಿದ್ಹಂಗ ಮುಕರತಾವ ಖೋಡಿಗೋಳು!

ಹೌದು ನೋಡು. ಮರ್ತೆ ಬಿಟ್ಟಿದ್ದೆ. ಇರವಿ ಅಂಬೋಣ ನೆನಪು ಆಯ್ತು. ಬೆಲ್ಲದ ಹರಿವಿ ಬುಡದಾಗಿನ ಪರಾತದಾಗ ನೀರು ಉಳಿದಿಲ್ಲ. ಎಲ್ಲಾ ಇರಿಬೀ ಪಾಲು ಆದೀತು. ಬೆಲ್ಲಾ ನೋಡಪಾ ರಾಮೂ. ನೀನರೆ ನೆನಪಲೆ ನೀರ್‍ಹಾಕು. ಇಲ್ದ್ರಿದ್ರ ತಟ್ಟಿನಾಗ ಕಟ್ಟಿ ನೆಲವಿನ ಮ್ಯಾಲೆ ಇಡು. ಅಂದರಽ ತಾಪೇ ತಪ್ತದ. ಅದೇನು ಹಾಲ್ಮಸರಿನ ಗಡಿಗೆಲ್ಲಾ. ಬೆಕ್ಕು ಹಾರಿ ಕೆಡವು ಹಾಂಗಿಲ್ಲ. ಅಷ್ಟು ಮಾಡಿ ಬಿಡು.

ಬೆಕ್ಕಂಬೂಣಾ ಧ್ಯಾನಕ್ಕ ಬಂತ ನೋಡು. ಈ ಗಾಡಿ ಗಡಿಬಿಡಿಯೊಳಗ ಹಾಲು ಮಸರಿನ ಕಿಡಕಿ ಬಾಗ್ಲಾನಽ ಹಾಕಿಲ್ನಾನು. ಗೋವಿಂದಾ ಹಾಕಿಬಾರಪಾ ಬಾಗಲಾ. ಮುಪ್ಪಿನಕಾಲ. ನನಗೂ ಅರವು ನುರವು ಆಗ್ಲಿಕ್ಕೆ ಹತ್ತೇದ. ಕೈಕಾಲೊಂದು ಒಣಗಿ ಹತ್ತೀಕಟಗಿ ಆಗ್ಯಾವ. ನೆನಪೊಂದು ಹಾರಲಿಕ್ಹಂತ್ಯಂದ್ರ ಆಗೇ ಹೋತು. ಕೃಷ್ಣಾ ನೀ ಮಾಡಿದ್ದೇ ಖರೇಪಾ ಇರ್‍ಲಿ! ನಂದೇನ ಯಾಕಾಗವಲ್ದು, ಹತ್ತೀ ಕಟಿಗಿ ಅಲ್ಲೇ ಬಿಟ್ಟಿರ್‍ನೋಡ್ರಿ ಬೈಲಾಗ್ಯೆ. ಎಲ್ಲಾರೆ ಒಂದು ಅಡ್ಡ ಮಳಿ ಹೊಡೀತಂದರಽ ಎಲ್ಲಾ ತೊಯ್ದು ಹೋಗ್ತಾವ, ತಂದು ಎಮ್ಮೆ ಕಟ್ಟೊ ಕೊಟ್ರ್ಯಾಗರಽ ಇಡಸು ರಾಮೂ; ಮರೆಯಬ್ಯಾಡಾ. ಅಯ್ಯಯ್ಯ. ಎಮ್ಮಿ ಕರಾ ಕಟ್ಸೂದ್ಸುದ್ದಾ ಮರ್‍ತೆ ಬಟ್ನಾನು! ಮಲ್ಯಾ ನೀನರೇ ನೆನಪ ಮಾಡಬೇಕೋ ಇಲ್ಲೋ! ಹೋಗು ಕರಾಕಟ್ಟು.

ನಾ ಬರ್‍ತೀನ್ಯಾ. ಹೂಂ. ಟಾಂಗಾ ಹೊಡೀಪಾ ಇಮಾಮಾ. ಉಡುಪಿ ಯಾತ್ರೀಯವರೆಲ್ಲಾರೂ ಟೇಸನ ತನ್ಕ ಹೋಗಿದ್ದಾರೋ ಏನೋ! ತಡಾ ಅತ! ಗಾಡೀ ಸಿಗೂದಿಲ್ಲ? ಅಯ್ಯ ನನ್ನ ಕರ್‍ಮ! ನನ್ನ ನಸೀಬ್ದಾಗಿಲ್ಲ ಉಡುಪಿ ಯಾತ್ರಿ. ದೇವರೇನ್ಮಾಡ್ಯಾನು. ಇರ್‍ಲಿ. ಹೊರಟದ್ದು ಹೊರಟೇವು ತೊರವಿಗ್ಹೋಗಿ ನರಸಿಂಹ ದೇವರಿಗೆ ಕಾಯರೇ ಒಡಿಸಿಗೊಂಡು ಬರೋಣ. ನಮ್ಮ ಪಾಲಿಗೆ ತೊರವಿ ನರಸಿಂಹ ದೇವ್ರಽ ಉಡುಪಿ ಕೃಷ್ಣಾಂಬೂಣು. ಇಂದ್ಯಾವಾರ? ಮಂಗಳವಾರ! ತೊರವಿಗ್ಹೋಗೂದಾದ್ರ ನಾಡ್ದ ಬ್ರಸ್ಪತ್ವಾರ ಹೋದರಾತು.

ಇಳಸಪಾ ಸಾಮಾನ. ನಿನ್ಮಾಡೂದು ಹರಿ! ನಿನ್ನಿಛ್ಛಾ!!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...