Home / ಲೇಖನ / ಹಾಸ್ಯ / ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿ- “ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ. ವೈದು ಟಾಂಗಾದಾಗ ಇಡಪಾ. ನೀ ಬ್ಯಾಡ ಮಲ್ಯಾ. ಈಗಽ ಮೈಲಿಗಿ ಮಾಡಬ್ಯಾಡ, ಗೋವಿಂದಾ ನೀ ಒಯ್ದು ಇಡ ಬಾಳಾ. ಹಿಂದಿನ ಮಗ್ಗಲ ಇಡು. ಟಾಂಗಾದ ಇಮಾಮಗ ಮುಟ್ಟಿಸ ಬ್ಯಾಡ.

ಹೋಗಿಬರ್‍ತಿನಾ ಗಂಗಾಬಾಯಿ, ಹುಡುಗುರು ಹುಪ್ಚಿ ಜ್ವಾಕೀಲೆ ಇರ್‍ಯಾಽ. ಅಂದಾಕರಾ ಉಲಳಕೋಚಿ ಹುಡುಗರು. ಭಾವಿಕಡೆ ಹೋಗ್ಗೊಡ ಬ್ಯಾಡಾ. ಭಾಂವ್ಯಾಗ ಹಣಿಕಿ ಹಾಕ್ಯಾವು ಎಲ್ಯಾರೆ. ಒಂದು ಹೋಗಿ ಒಂದು ಆದೀತು. ಹಿಂದಿನ ಬಾಗಲಾನ ಇಕ್ಕಿ ಚಿಲಕಾ ಹಾಕು. ಅಂದರ ನಿಶ್ಚಿಂತಿ ಆಗತದ. ಇಷ್ಟು ಹುಡುಗುರ್‍ನ ಕಟಿಕೊಂಡು ಹ್ಯಾಂಗ ಇರ್‍ತೀಯೋ ಏನೋ. ಇದೇ ಚಿಂತಿ ಹತ್ತೇದ ನನಗ. ಅವು ಕಿರಿಕಿರಿ ಮಾಡತಾವಂತ ಸಿಕ್ಕದ್ದ ತಿನ್ಲಿಕ್ಕೆ ಕೊಡಬ್ಯಾಡ. ಬ್ಯಾಸಿಗೆ ದಿವಸ ನೀರು ಕುಡಕುಡದು ಜಡ್ಡಾಗ್ತದ ಹುಡುಗರಿಗೆ. ಮನ್ಯಾಗೇನಾರ ಮಾಡಿದರ ಇರಿವಿ ಮುಕರಿದ್ಹಂಗ ಮುಕರತಾವ ಖೋಡಿಗೋಳು!

ಹೌದು ನೋಡು. ಮರ್ತೆ ಬಿಟ್ಟಿದ್ದೆ. ಇರವಿ ಅಂಬೋಣ ನೆನಪು ಆಯ್ತು. ಬೆಲ್ಲದ ಹರಿವಿ ಬುಡದಾಗಿನ ಪರಾತದಾಗ ನೀರು ಉಳಿದಿಲ್ಲ. ಎಲ್ಲಾ ಇರಿಬೀ ಪಾಲು ಆದೀತು. ಬೆಲ್ಲಾ ನೋಡಪಾ ರಾಮೂ. ನೀನರೆ ನೆನಪಲೆ ನೀರ್‍ಹಾಕು. ಇಲ್ದ್ರಿದ್ರ ತಟ್ಟಿನಾಗ ಕಟ್ಟಿ ನೆಲವಿನ ಮ್ಯಾಲೆ ಇಡು. ಅಂದರಽ ತಾಪೇ ತಪ್ತದ. ಅದೇನು ಹಾಲ್ಮಸರಿನ ಗಡಿಗೆಲ್ಲಾ. ಬೆಕ್ಕು ಹಾರಿ ಕೆಡವು ಹಾಂಗಿಲ್ಲ. ಅಷ್ಟು ಮಾಡಿ ಬಿಡು.

ಬೆಕ್ಕಂಬೂಣಾ ಧ್ಯಾನಕ್ಕ ಬಂತ ನೋಡು. ಈ ಗಾಡಿ ಗಡಿಬಿಡಿಯೊಳಗ ಹಾಲು ಮಸರಿನ ಕಿಡಕಿ ಬಾಗ್ಲಾನಽ ಹಾಕಿಲ್ನಾನು. ಗೋವಿಂದಾ ಹಾಕಿಬಾರಪಾ ಬಾಗಲಾ. ಮುಪ್ಪಿನಕಾಲ. ನನಗೂ ಅರವು ನುರವು ಆಗ್ಲಿಕ್ಕೆ ಹತ್ತೇದ. ಕೈಕಾಲೊಂದು ಒಣಗಿ ಹತ್ತೀಕಟಗಿ ಆಗ್ಯಾವ. ನೆನಪೊಂದು ಹಾರಲಿಕ್ಹಂತ್ಯಂದ್ರ ಆಗೇ ಹೋತು. ಕೃಷ್ಣಾ ನೀ ಮಾಡಿದ್ದೇ ಖರೇಪಾ ಇರ್‍ಲಿ! ನಂದೇನ ಯಾಕಾಗವಲ್ದು, ಹತ್ತೀ ಕಟಿಗಿ ಅಲ್ಲೇ ಬಿಟ್ಟಿರ್‍ನೋಡ್ರಿ ಬೈಲಾಗ್ಯೆ. ಎಲ್ಲಾರೆ ಒಂದು ಅಡ್ಡ ಮಳಿ ಹೊಡೀತಂದರಽ ಎಲ್ಲಾ ತೊಯ್ದು ಹೋಗ್ತಾವ, ತಂದು ಎಮ್ಮೆ ಕಟ್ಟೊ ಕೊಟ್ರ್ಯಾಗರಽ ಇಡಸು ರಾಮೂ; ಮರೆಯಬ್ಯಾಡಾ. ಅಯ್ಯಯ್ಯ. ಎಮ್ಮಿ ಕರಾ ಕಟ್ಸೂದ್ಸುದ್ದಾ ಮರ್‍ತೆ ಬಟ್ನಾನು! ಮಲ್ಯಾ ನೀನರೇ ನೆನಪ ಮಾಡಬೇಕೋ ಇಲ್ಲೋ! ಹೋಗು ಕರಾಕಟ್ಟು.

ನಾ ಬರ್‍ತೀನ್ಯಾ. ಹೂಂ. ಟಾಂಗಾ ಹೊಡೀಪಾ ಇಮಾಮಾ. ಉಡುಪಿ ಯಾತ್ರೀಯವರೆಲ್ಲಾರೂ ಟೇಸನ ತನ್ಕ ಹೋಗಿದ್ದಾರೋ ಏನೋ! ತಡಾ ಅತ! ಗಾಡೀ ಸಿಗೂದಿಲ್ಲ? ಅಯ್ಯ ನನ್ನ ಕರ್‍ಮ! ನನ್ನ ನಸೀಬ್ದಾಗಿಲ್ಲ ಉಡುಪಿ ಯಾತ್ರಿ. ದೇವರೇನ್ಮಾಡ್ಯಾನು. ಇರ್‍ಲಿ. ಹೊರಟದ್ದು ಹೊರಟೇವು ತೊರವಿಗ್ಹೋಗಿ ನರಸಿಂಹ ದೇವರಿಗೆ ಕಾಯರೇ ಒಡಿಸಿಗೊಂಡು ಬರೋಣ. ನಮ್ಮ ಪಾಲಿಗೆ ತೊರವಿ ನರಸಿಂಹ ದೇವ್ರಽ ಉಡುಪಿ ಕೃಷ್ಣಾಂಬೂಣು. ಇಂದ್ಯಾವಾರ? ಮಂಗಳವಾರ! ತೊರವಿಗ್ಹೋಗೂದಾದ್ರ ನಾಡ್ದ ಬ್ರಸ್ಪತ್ವಾರ ಹೋದರಾತು.

ಇಳಸಪಾ ಸಾಮಾನ. ನಿನ್ಮಾಡೂದು ಹರಿ! ನಿನ್ನಿಛ್ಛಾ!!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...