ಯಶೋಧರೆ…ಗೆ

ಏಕೆ ನೀನು ಮೌನ ವಹಿಸಿದೆ,
ಮಾತನೊಲ್ಲದ ಶಿಲ್ಪವಾದೆ
ಹೇಳೆ… ನೀ ಯಶೋಧರೆ?

ಯಾವ ಕಾರಣ,
ಯಾವ ಹೂರಣ,
ತೋರಣದಿ ನಡೆದಿತು ನಿನ್ನ ಹರಣ,

ಏನೋ ಅರ್ಥವ
ಹುಡುಕೋಗಣ್ಣಿಗೆ,
ತಿಳಿಯದಾಯಿತೆ ನಿನ್ನೊಲವ ಚರಣ,

ಸತ್ಯ ಶುದ್ಧ ಜೀವನ
ಬಾಳ ಬೆಸುಗೆಗೆ
ಅರ್ಥವಿರದವರಿಂದಲಿ ನೊಂದೆಯೊ?

ಕಣ್ಣ ಮುಂದಿನ
ಜಗವ ಕಾಣಲು ಬೋಧಿ ವೃಕ್ಷವಾಗಿ ರೂಪನು ತಳೆದೆಯೊ?

ಸಿದ್ಧ-ಅರ್ಥವಳಿದು
ಬುದ್ಧನಾದರೂ
ನಿನ್ನ ಶುದ್ಧ ಪ್ರೇಮಕೆ ತುಂಬಲಿಲ್ಲವೇ ನೇಸರ?

ನಾಳೆ ಕಾಣದ
ಕಣ್ಣ ನೋಟಕೆ…
ರಾಹುಲನೆಂದುದೇತಕೊ ಅಪಸ್ವರ

ನಿನ್ನ ಕಾವ್ಯವು
ನಿನ್ನದಲ್ಲದ ಭಾವದಲಿ
ಭಾರವಾಗಿದೆ.

ಇವಳಿಗಿಷ್ಟೇ ಸಾಕು
ಎನ್ನುವ ಕೂಪನಿಷ್ಠದಿ
ಎಲ್ಲೋ ಒಂದೆಡೆ ಸೊರಗಿದೆ…!

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮೆಯೆಂಬ ಸತ್ಯ
Next post ತುಂತುರು ಸೋನೆಯಲ್ಲೊಂದು ಪ್ರೇಮಕಥೆ..

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…