ಯಶೋಧರೆ…ಗೆ

ಏಕೆ ನೀನು ಮೌನ ವಹಿಸಿದೆ,
ಮಾತನೊಲ್ಲದ ಶಿಲ್ಪವಾದೆ
ಹೇಳೆ… ನೀ ಯಶೋಧರೆ?

ಯಾವ ಕಾರಣ,
ಯಾವ ಹೂರಣ,
ತೋರಣದಿ ನಡೆದಿತು ನಿನ್ನ ಹರಣ,

ಏನೋ ಅರ್ಥವ
ಹುಡುಕೋಗಣ್ಣಿಗೆ,
ತಿಳಿಯದಾಯಿತೆ ನಿನ್ನೊಲವ ಚರಣ,

ಸತ್ಯ ಶುದ್ಧ ಜೀವನ
ಬಾಳ ಬೆಸುಗೆಗೆ
ಅರ್ಥವಿರದವರಿಂದಲಿ ನೊಂದೆಯೊ?

ಕಣ್ಣ ಮುಂದಿನ
ಜಗವ ಕಾಣಲು ಬೋಧಿ ವೃಕ್ಷವಾಗಿ ರೂಪನು ತಳೆದೆಯೊ?

ಸಿದ್ಧ-ಅರ್ಥವಳಿದು
ಬುದ್ಧನಾದರೂ
ನಿನ್ನ ಶುದ್ಧ ಪ್ರೇಮಕೆ ತುಂಬಲಿಲ್ಲವೇ ನೇಸರ?

ನಾಳೆ ಕಾಣದ
ಕಣ್ಣ ನೋಟಕೆ…
ರಾಹುಲನೆಂದುದೇತಕೊ ಅಪಸ್ವರ

ನಿನ್ನ ಕಾವ್ಯವು
ನಿನ್ನದಲ್ಲದ ಭಾವದಲಿ
ಭಾರವಾಗಿದೆ.

ಇವಳಿಗಿಷ್ಟೇ ಸಾಕು
ಎನ್ನುವ ಕೂಪನಿಷ್ಠದಿ
ಎಲ್ಲೋ ಒಂದೆಡೆ ಸೊರಗಿದೆ…!

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮೆಯೆಂಬ ಸತ್ಯ
Next post ತುಂತುರು ಸೋನೆಯಲ್ಲೊಂದು ಪ್ರೇಮಕಥೆ..

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys