ಊರ್ಮಿಳೆ

ಕವಿಯ ಬರಹದಕ್ಷರದಲಿ
ನಿನ್ನ ಬಾಳಿನಕ್ಕರ ತೋರಲಾಗದು…
ಓ ಸೌಮಿತ್ರಾ ಪ್ರಿಯೆ ಊರ್ಮಿಳಾ…

ಎಲ್ಲೆ ಇರಲಿ, ಹೇಗೆ ಇರಲಿ
ಒಲಿದವಗೆ ಕೊರಳ ನೀಡಿದ ಚಿತ್ಕಳಾ
ಶಬ್ದಮೀರಿದ ನಿಃಶಬ್ಧದಲ್ಲಿ
ತವಸಿಯಾಗಿ ಸಾಗಿದೆ,
ಸಂಗ ತೊರೆದ ನಿಸ್ಸಂಗದಲ್ಲಿ
ಚೈತನ್ಯವಾಗಿ ಸೇರಿದೆ…,
ಇದ್ದು ಇರದಾ ನಂದನದಲಿ
ಸಿದ್ಧ ಸಾಧನೆ ಬಯಸಿದೆ….
ಕಣ್ಣರೆಪ್ಪೆಯಂಚಿನಲ್ಲಿ
ಇನಿಯನನಿಟ್ಟು ತೂಗಿದೆ,
ಮೇಘ ಸಾಲಿನ ಮಾಲೆಯಲ್ಲಿ
ಶ್ರೀ ಸಂದೇಶವ ಕೋರಿದೆ
ನೀನೇ ಧನ್ಯಳು, ನೀನೇ ಮಾನ್ಯಳು,
ನೀನೇ ಶೂನ್ಯದ ಬೆಳದಿಂಗಳು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗಿ ನೋಡುವ ಬಾರೆ
Next post ಜಗತ್ತು ಬದಲಾತು

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys